ಮೈಸೂರು

ತಪ್ಪು ಮಾಡಿದ್ದರೆ ದರ್ಶನ್‌ಗೆ ತಕ್ಕ ಶಿಕ್ಷೆಯಾಗಲಿ; ಜಿ.ಟಿ.ದೇವೇಗೌಡ ಆಗ್ರಹ

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣ ಸಂಬಂಧ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಮೇಲೆ ನಂಬಿಕೆ ಹೆಚ್ಚಾಗಿದೆ.

ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ ತಪ್ಪು ಮಾಡಿದ್ರೆ ಅವರಿಗೆ ತಕ್ಕ ಶಿಕ್ಷೆಯಾಗುತ್ತೆ. ಚಿತ್ರರಂಗದ ನಾಯಕ ನಟ ಈ ರೀತಿ ಅಮಾನವೀಯ ಕೃತ್ಯಕ್ಕೆ ಇಳಿದಿರುವುದು ಭಾರೀ ಬೇಸರದ ಸಂಗತಿ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಶಾಸಕರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕೃತ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನೇ ವಿಡಿಯೋ ನೋಡಿದ್ದೇನೆ ಎಂದಿದ್ದು, ದರ್ಶನ್ ಪರ ಯಾರೂ ಕೂಡ ಮಾತನಾಡಬಾರದು ಅಂತಾ ಸೂಚನೆ ನೀಡಿದ್ದಾರೆ ಎಂದರು.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

49 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

53 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

59 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago