ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣ ಸಂಬಂಧ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಮೇಲೆ ನಂಬಿಕೆ ಹೆಚ್ಚಾಗಿದೆ.
ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ ತಪ್ಪು ಮಾಡಿದ್ರೆ ಅವರಿಗೆ ತಕ್ಕ ಶಿಕ್ಷೆಯಾಗುತ್ತೆ. ಚಿತ್ರರಂಗದ ನಾಯಕ ನಟ ಈ ರೀತಿ ಅಮಾನವೀಯ ಕೃತ್ಯಕ್ಕೆ ಇಳಿದಿರುವುದು ಭಾರೀ ಬೇಸರದ ಸಂಗತಿ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಶಾಸಕರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕೃತ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನೇ ವಿಡಿಯೋ ನೋಡಿದ್ದೇನೆ ಎಂದಿದ್ದು, ದರ್ಶನ್ ಪರ ಯಾರೂ ಕೂಡ ಮಾತನಾಡಬಾರದು ಅಂತಾ ಸೂಚನೆ ನೀಡಿದ್ದಾರೆ ಎಂದರು.
ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್…
90ರ ದಶಕದಲ್ಲಿ ಪೊತುಕುಚಿ ಶ್ರೀನಿವಾಸ್ ಹೈದರಾಬಾದಿನ ಮಿಯಾಪುರದಲ್ಲಿದ್ದ ಒಂದು ಜರ್ಮನ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಅವರ ಕಂಪೆನಿಯ ಪಕ್ಕದಲ್ಲಿ ಒಂದು…
ಕೆ.ಬಿ.ರಮೇಶನಾಯಕ ಮೈಸೂರು : ಮೈಸೂರು ಮಹಾನಗರಪಾಲಿಕೆ ಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿ ೫ ತಿಂಗಳು ಕಳೆದರೂ ರಾಜ್ಯ…
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…