ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ ಅನುಭವಿಸಬಾರದು ಎನ್ನುವುದು ಭಾರತದ ನ್ಯಾಯಾಂಗದ ಘೋಷವಾಕ್ಯ. ಆದರೆ, ಹಣಬಲ, ರಾಜಕೀಯ ಬಲ, ಜಾತಿ ಬಲ ಇರುವ ಅಪರಾಧಿಗಳನ್ನು ಕಾನೂನಿನ ಕುಣಿಕೆಯಿಂದ ಪಾರು ಮಾಡಿ ರಕ್ಷಣೆ ನೀಡುತ್ತಿರುವ ಅನಾಗರಿಕ ವ್ಯವಸ್ಥೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಕೊಡಗಿನ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಆದಿವಾಸಿ ಸಮುದಾಯದ ಸುರೇಶ್ ಪ್ರಕರಣ ಜೀವಂತ ಸಾಕ್ಷಿಯಾಗಿದೆ.
ಬಂಡವಾಳ ಶಾಹಿಗಳ ಹಿಡಿತದಿಂದ ಭ್ರಷ್ಟಗೊಂಡಿರುವ ರಾಜಕೀಯ ಮತ್ತು ಅಧಿಕಾರಿಗಳು ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್ ನನ್ನು ಬಲಿಪಶು ಮಾಡಿದ ಮಾದರಿಯಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಆದಿವಾಸಿ ಸಮುದಾಯದ ಸುರೇಶ ಅವರನ್ನು ಬಲಿಪಶು ಮಾಡಲಾಗಿದೆ.
ಕೊಲೆ ಅತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ೧೪ ವರ್ಷ ಶಿಕ್ಷೆ ಅನುಭವಿಸಿದರೇ ಸುರೇಶ್ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಎರಡು ಪ್ರಕರಣದಲ್ಲೂ ತನಿಖಾಧಿಕಾರಿಗಳು ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಯಾರದೋ ಮರ್ಜಿಗೊಳಗಾಗಿ ಇಂತಹ ಅಮಾಯಕರನ್ನು ಶಿಕ್ಷೆಗೆ ಗುರಿಪಡಿಸಿ ಸಾಕ್ಷಿ ನಾಶಮಾಡುವ ಅಧಿಕಾರಗಳನ್ನೆ ಅಪರಾಧಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದೆ.
ಯಾವುದೇ ಅಪರಾಧ ಮಾಡದಿದ್ದರೂ ಜೈಲು ಶಿಕ್ಷೆ ಅನುಭವಿಸಿ ಬದುಕು ಕಳೆದುಕೊಂಡಿರುವ ಸುರೇಶ್ ಮತ್ತು ಸಂತೋಷ್ ಕುಟುಂಬಗಳಿಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸಬೇಕು. ಈ ಪ್ರಕರಣವನ್ನು ಮರು ತನಿಖೆ ನಡೆಸಿ ಆರೋಪಿ ಜೊತೆ ತನಿಖಾಧಿಕಾರಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿಎಂ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೊಡಾ ವಿರುದ್ಧ…
ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ…
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ…
ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್ ಫ್ಲೈ’ ಚಿತ್ರವು…