ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ ಅನುಭವಿಸಬಾರದು ಎನ್ನುವುದು ಭಾರತದ ನ್ಯಾಯಾಂಗದ ಘೋಷವಾಕ್ಯ. ಆದರೆ, ಹಣಬಲ, ರಾಜಕೀಯ ಬಲ, ಜಾತಿ ಬಲ ಇರುವ ಅಪರಾಧಿಗಳನ್ನು ಕಾನೂನಿನ ಕುಣಿಕೆಯಿಂದ ಪಾರು ಮಾಡಿ ರಕ್ಷಣೆ ನೀಡುತ್ತಿರುವ ಅನಾಗರಿಕ ವ್ಯವಸ್ಥೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಕೊಡಗಿನ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಆದಿವಾಸಿ ಸಮುದಾಯದ ಸುರೇಶ್ ಪ್ರಕರಣ ಜೀವಂತ ಸಾಕ್ಷಿಯಾಗಿದೆ.
ಬಂಡವಾಳ ಶಾಹಿಗಳ ಹಿಡಿತದಿಂದ ಭ್ರಷ್ಟಗೊಂಡಿರುವ ರಾಜಕೀಯ ಮತ್ತು ಅಧಿಕಾರಿಗಳು ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್ ನನ್ನು ಬಲಿಪಶು ಮಾಡಿದ ಮಾದರಿಯಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಆದಿವಾಸಿ ಸಮುದಾಯದ ಸುರೇಶ ಅವರನ್ನು ಬಲಿಪಶು ಮಾಡಲಾಗಿದೆ.
ಕೊಲೆ ಅತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ೧೪ ವರ್ಷ ಶಿಕ್ಷೆ ಅನುಭವಿಸಿದರೇ ಸುರೇಶ್ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಎರಡು ಪ್ರಕರಣದಲ್ಲೂ ತನಿಖಾಧಿಕಾರಿಗಳು ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಯಾರದೋ ಮರ್ಜಿಗೊಳಗಾಗಿ ಇಂತಹ ಅಮಾಯಕರನ್ನು ಶಿಕ್ಷೆಗೆ ಗುರಿಪಡಿಸಿ ಸಾಕ್ಷಿ ನಾಶಮಾಡುವ ಅಧಿಕಾರಗಳನ್ನೆ ಅಪರಾಧಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದೆ.
ಯಾವುದೇ ಅಪರಾಧ ಮಾಡದಿದ್ದರೂ ಜೈಲು ಶಿಕ್ಷೆ ಅನುಭವಿಸಿ ಬದುಕು ಕಳೆದುಕೊಂಡಿರುವ ಸುರೇಶ್ ಮತ್ತು ಸಂತೋಷ್ ಕುಟುಂಬಗಳಿಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸಬೇಕು. ಈ ಪ್ರಕರಣವನ್ನು ಮರು ತನಿಖೆ ನಡೆಸಿ ಆರೋಪಿ ಜೊತೆ ತನಿಖಾಧಿಕಾರಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…