ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ ಅನುಭವಿಸಬಾರದು ಎನ್ನುವುದು ಭಾರತದ ನ್ಯಾಯಾಂಗದ ಘೋಷವಾಕ್ಯ. ಆದರೆ, ಹಣಬಲ, ರಾಜಕೀಯ ಬಲ, ಜಾತಿ ಬಲ ಇರುವ ಅಪರಾಧಿಗಳನ್ನು ಕಾನೂನಿನ ಕುಣಿಕೆಯಿಂದ ಪಾರು ಮಾಡಿ ರಕ್ಷಣೆ ನೀಡುತ್ತಿರುವ ಅನಾಗರಿಕ ವ್ಯವಸ್ಥೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಕೊಡಗಿನ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಆದಿವಾಸಿ ಸಮುದಾಯದ ಸುರೇಶ್ ಪ್ರಕರಣ ಜೀವಂತ ಸಾಕ್ಷಿಯಾಗಿದೆ.
ಬಂಡವಾಳ ಶಾಹಿಗಳ ಹಿಡಿತದಿಂದ ಭ್ರಷ್ಟಗೊಂಡಿರುವ ರಾಜಕೀಯ ಮತ್ತು ಅಧಿಕಾರಿಗಳು ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್ ನನ್ನು ಬಲಿಪಶು ಮಾಡಿದ ಮಾದರಿಯಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಆದಿವಾಸಿ ಸಮುದಾಯದ ಸುರೇಶ ಅವರನ್ನು ಬಲಿಪಶು ಮಾಡಲಾಗಿದೆ.
ಕೊಲೆ ಅತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ೧೪ ವರ್ಷ ಶಿಕ್ಷೆ ಅನುಭವಿಸಿದರೇ ಸುರೇಶ್ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಎರಡು ಪ್ರಕರಣದಲ್ಲೂ ತನಿಖಾಧಿಕಾರಿಗಳು ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಯಾರದೋ ಮರ್ಜಿಗೊಳಗಾಗಿ ಇಂತಹ ಅಮಾಯಕರನ್ನು ಶಿಕ್ಷೆಗೆ ಗುರಿಪಡಿಸಿ ಸಾಕ್ಷಿ ನಾಶಮಾಡುವ ಅಧಿಕಾರಗಳನ್ನೆ ಅಪರಾಧಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದೆ.
ಯಾವುದೇ ಅಪರಾಧ ಮಾಡದಿದ್ದರೂ ಜೈಲು ಶಿಕ್ಷೆ ಅನುಭವಿಸಿ ಬದುಕು ಕಳೆದುಕೊಂಡಿರುವ ಸುರೇಶ್ ಮತ್ತು ಸಂತೋಷ್ ಕುಟುಂಬಗಳಿಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸಬೇಕು. ಈ ಪ್ರಕರಣವನ್ನು ಮರು ತನಿಖೆ ನಡೆಸಿ ಆರೋಪಿ ಜೊತೆ ತನಿಖಾಧಿಕಾರಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…