ಮೈಸೂರು

ನಿರಪರಾಧಿಗೆ ಶಿಕ್ಷೆ ಪ್ರಕರಣ | ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಸಂಸ ಆಗ್ರಹ

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ ಅನುಭವಿಸಬಾರದು ಎನ್ನುವುದು ಭಾರತದ ನ್ಯಾಯಾಂಗದ ಘೋಷವಾಕ್ಯ. ಆದರೆ, ಹಣಬಲ, ರಾಜಕೀಯ ಬಲ, ಜಾತಿ ಬಲ ಇರುವ ಅಪರಾಧಿಗಳನ್ನು ಕಾನೂನಿನ ಕುಣಿಕೆಯಿಂದ ಪಾರು ಮಾಡಿ ರಕ್ಷಣೆ ನೀಡುತ್ತಿರುವ ಅನಾಗರಿಕ ವ್ಯವಸ್ಥೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಕೊಡಗಿನ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಆದಿವಾಸಿ ಸಮುದಾಯದ ಸುರೇಶ್ ಪ್ರಕರಣ ಜೀವಂತ ಸಾಕ್ಷಿಯಾಗಿದೆ.

ಬಂಡವಾಳ ಶಾಹಿಗಳ ಹಿಡಿತದಿಂದ ಭ್ರಷ್ಟಗೊಂಡಿರುವ ರಾಜಕೀಯ ಮತ್ತು ಅಧಿಕಾರಿಗಳು ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್ ನನ್ನು ಬಲಿಪಶು ಮಾಡಿದ ಮಾದರಿಯಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಆದಿವಾಸಿ ಸಮುದಾಯದ ಸುರೇಶ ಅವರನ್ನು ಬಲಿಪಶು ಮಾಡಲಾಗಿದೆ.

ಕೊಲೆ ಅತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ೧೪ ವರ್ಷ ಶಿಕ್ಷೆ ಅನುಭವಿಸಿದರೇ ಸುರೇಶ್ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಎರಡು ಪ್ರಕರಣದಲ್ಲೂ ತನಿಖಾಧಿಕಾರಿಗಳು ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಯಾರದೋ ಮರ್ಜಿಗೊಳಗಾಗಿ ಇಂತಹ ಅಮಾಯಕರನ್ನು ಶಿಕ್ಷೆಗೆ ಗುರಿಪಡಿಸಿ ಸಾಕ್ಷಿ ನಾಶಮಾಡುವ ಅಧಿಕಾರಗಳನ್ನೆ ಅಪರಾಧಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದೆ.

ಯಾವುದೇ ಅಪರಾಧ ಮಾಡದಿದ್ದರೂ ಜೈಲು ಶಿಕ್ಷೆ ಅನುಭವಿಸಿ ಬದುಕು ಕಳೆದುಕೊಂಡಿರುವ ಸುರೇಶ್ ಮತ್ತು ಸಂತೋಷ್ ಕುಟುಂಬಗಳಿಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸಬೇಕು. ಈ ಪ್ರಕರಣವನ್ನು ಮರು ತನಿಖೆ ನಡೆಸಿ ಆರೋಪಿ ಜೊತೆ ತನಿಖಾಧಿಕಾರಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

15 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

16 hours ago