ಮೈಸೂರು

ನಿರಪರಾಧಿಗೆ ಶಿಕ್ಷೆ ಪ್ರಕರಣ | ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಸಂಸ ಆಗ್ರಹ

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ ಅನುಭವಿಸಬಾರದು ಎನ್ನುವುದು ಭಾರತದ ನ್ಯಾಯಾಂಗದ ಘೋಷವಾಕ್ಯ. ಆದರೆ, ಹಣಬಲ, ರಾಜಕೀಯ ಬಲ, ಜಾತಿ ಬಲ ಇರುವ ಅಪರಾಧಿಗಳನ್ನು ಕಾನೂನಿನ ಕುಣಿಕೆಯಿಂದ ಪಾರು ಮಾಡಿ ರಕ್ಷಣೆ ನೀಡುತ್ತಿರುವ ಅನಾಗರಿಕ ವ್ಯವಸ್ಥೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಕೊಡಗಿನ ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಆದಿವಾಸಿ ಸಮುದಾಯದ ಸುರೇಶ್ ಪ್ರಕರಣ ಜೀವಂತ ಸಾಕ್ಷಿಯಾಗಿದೆ.

ಬಂಡವಾಳ ಶಾಹಿಗಳ ಹಿಡಿತದಿಂದ ಭ್ರಷ್ಟಗೊಂಡಿರುವ ರಾಜಕೀಯ ಮತ್ತು ಅಧಿಕಾರಿಗಳು ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್ ನನ್ನು ಬಲಿಪಶು ಮಾಡಿದ ಮಾದರಿಯಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಆದಿವಾಸಿ ಸಮುದಾಯದ ಸುರೇಶ ಅವರನ್ನು ಬಲಿಪಶು ಮಾಡಲಾಗಿದೆ.

ಕೊಲೆ ಅತ್ಯಾಚಾರ ಪ್ರಕರಣದಲ್ಲಿ ಸಂತೋಷ್ ರಾವ್ ೧೪ ವರ್ಷ ಶಿಕ್ಷೆ ಅನುಭವಿಸಿದರೇ ಸುರೇಶ್ ೨ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಎರಡು ಪ್ರಕರಣದಲ್ಲೂ ತನಿಖಾಧಿಕಾರಿಗಳು ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಯಾರದೋ ಮರ್ಜಿಗೊಳಗಾಗಿ ಇಂತಹ ಅಮಾಯಕರನ್ನು ಶಿಕ್ಷೆಗೆ ಗುರಿಪಡಿಸಿ ಸಾಕ್ಷಿ ನಾಶಮಾಡುವ ಅಧಿಕಾರಗಳನ್ನೆ ಅಪರಾಧಿಗಳೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದೆ.

ಯಾವುದೇ ಅಪರಾಧ ಮಾಡದಿದ್ದರೂ ಜೈಲು ಶಿಕ್ಷೆ ಅನುಭವಿಸಿ ಬದುಕು ಕಳೆದುಕೊಂಡಿರುವ ಸುರೇಶ್ ಮತ್ತು ಸಂತೋಷ್ ಕುಟುಂಬಗಳಿಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸಬೇಕು. ಈ ಪ್ರಕರಣವನ್ನು ಮರು ತನಿಖೆ ನಡೆಸಿ ಆರೋಪಿ ಜೊತೆ ತನಿಖಾಧಿಕಾರಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

11 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

11 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

11 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

11 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

12 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

20 hours ago