ಮೈಸೂರು

ವಿದ್ಯುತ್‌ ಸ್ವೀಕರಣಾ ಕೇಂದ್ರಗಳ ಸ್ಥಾಪನೆಗೆ ಕೆಪಿಟಿಸಿಎಲ್‌ನಿಂದ ಭೂಮಿ ಖರೀದಿ

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ

ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ ಜಮೀನು ಇದ್ದಲ್ಲಿ ಮಾರಾಟ ಮಾಡುವಂತೆ ಸ್ಥಳೀಯ ಭೂ ಮಾಲೀಕರನ್ನು ನಿಗಮವು ಕೋರಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಟಿಸಿಎಲ್, ಮೈಸೂರಿನ ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಭೂಮಿ ನೀಡಿ ಸಹಕರಿಸುವಂತೆ ಭೂಮಾಲೀಕರನ್ನು ಕೋರಿದೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮಿರ್ಲೆ ಗ್ರಾಮ (5 ಕಿ.ಮೀ ವ್ಯಾಪ್ತಿ), ತಿ.ನರಸೀಪುರ ತಾಲೂಕು (5 ಕಿ.ಮೀ ವ್ಯಾಪ್ತಿ) ಹಾಗೂ ಎಚ್‌.ಡಿ. ಕೋಟೆ ತಾಲೂಕು (5 ಕಿ.ಮೀ ವ್ಯಾಪ್ತಿ)ಗಳಲ್ಲಿ ಈ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಕನಿಷ್ಠ 12 ಎಕರೆ ವಿಸ್ತೀರ್ಣದ ಸಮತಟ್ಟಾದ ಭೂಮಿಯ ಅಗತ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಕಂದಾಯ ಇಲಾಖೆ ನಿಗದಿಪಡಿಸುವ ಬೆಲೆಯಲ್ಲಿ ಈ ತಾಲೂಕುಗಳ ವ್ಯಾಪ್ತಿಯ ಅಥವಾ ಸುತ್ತಲಿನ ಜಮೀನನ್ನು ಭೂ ಮಾಲೀಕರಿಂದ ನೇರವಾಗಿ ಖರೀದಿ ಮಾಡಲು ನಿಯಮಿತವು ಉದ್ದೇಶಿಸಿದೆ. ಕವಿಪ್ರನಿನಿಕ್ಕೆ ಜಮೀನು ಮಾರಾಟ ಮಾಡಲು ಇಚ್ಛಿಸುವ ಭೂ ಮಾಲೀಕರು ಖದ್ದಾಗಿ ಅಥವಾ ದೂರವಾಣಿ ಮೂಲಕ(ಜಿ. ಮನು, ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌(ಕಾಮಗಾರಿ) 9480813912 ಅಥವಾ ಕಚೇರಿಯನ್ನು ಸಂಪರ್ಕಿಸುವಂತೆ ಕೆಪಿಟಿಸಿಎಲ್ ಮೈಸೂರು ಯೋಜನೆಗಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌(ವಿ.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago