KPTCL
ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ
ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ ಜಮೀನು ಇದ್ದಲ್ಲಿ ಮಾರಾಟ ಮಾಡುವಂತೆ ಸ್ಥಳೀಯ ಭೂ ಮಾಲೀಕರನ್ನು ನಿಗಮವು ಕೋರಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಟಿಸಿಎಲ್, ಮೈಸೂರಿನ ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಭೂಮಿ ನೀಡಿ ಸಹಕರಿಸುವಂತೆ ಭೂಮಾಲೀಕರನ್ನು ಕೋರಿದೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮಿರ್ಲೆ ಗ್ರಾಮ (5 ಕಿ.ಮೀ ವ್ಯಾಪ್ತಿ), ತಿ.ನರಸೀಪುರ ತಾಲೂಕು (5 ಕಿ.ಮೀ ವ್ಯಾಪ್ತಿ) ಹಾಗೂ ಎಚ್.ಡಿ. ಕೋಟೆ ತಾಲೂಕು (5 ಕಿ.ಮೀ ವ್ಯಾಪ್ತಿ)ಗಳಲ್ಲಿ ಈ ವಿದ್ಯುತ್ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಕನಿಷ್ಠ 12 ಎಕರೆ ವಿಸ್ತೀರ್ಣದ ಸಮತಟ್ಟಾದ ಭೂಮಿಯ ಅಗತ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.
ಕಂದಾಯ ಇಲಾಖೆ ನಿಗದಿಪಡಿಸುವ ಬೆಲೆಯಲ್ಲಿ ಈ ತಾಲೂಕುಗಳ ವ್ಯಾಪ್ತಿಯ ಅಥವಾ ಸುತ್ತಲಿನ ಜಮೀನನ್ನು ಭೂ ಮಾಲೀಕರಿಂದ ನೇರವಾಗಿ ಖರೀದಿ ಮಾಡಲು ನಿಯಮಿತವು ಉದ್ದೇಶಿಸಿದೆ. ಕವಿಪ್ರನಿನಿಕ್ಕೆ ಜಮೀನು ಮಾರಾಟ ಮಾಡಲು ಇಚ್ಛಿಸುವ ಭೂ ಮಾಲೀಕರು ಖದ್ದಾಗಿ ಅಥವಾ ದೂರವಾಣಿ ಮೂಲಕ(ಜಿ. ಮನು, ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ಕಾಮಗಾರಿ) 9480813912 ಅಥವಾ ಕಚೇರಿಯನ್ನು ಸಂಪರ್ಕಿಸುವಂತೆ ಕೆಪಿಟಿಸಿಎಲ್ ಮೈಸೂರು ಯೋಜನೆಗಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ.) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…