ಮೈಸೂರು

ಕೂರ್ಗಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಪುಟ್ಟ ಸೋಮಾಚಾರಿ ಅವಿರೋಧ ಆಯ್ಕೆ

ಮೈಸೂರು: ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಮಸ್ಥರು ಒಟ್ಟಾಗಿ ಸೇರಿ ಪುಟ್ಟ ಸೋಮಾಚಾರಿ ಎಂಬುವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ನಡೆದ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿತ್ತು.

ಚುನಾವಣೆಯು ಕ್ರಮವಾಗಿ ನಡೆದಿಲ್ಲ. ನೀತಿ ನಿಬಂಧನೆಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಷೇರುದಾರರು ಆರೋಪಿಸಿದ್ದರು.

ಕಳೆದ 23 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಅಧ್ಯಕ್ಷರಾಗಿ ನಾಗೇಂದ್ರ ಮತ್ತು ಕಾರ್ಯದರ್ಶಿಯಾಗಿ ಸೀತಾರಾಮ್‌ ಅವರೇ ಮುಂದುವರಿದುಕೊಂಡು ಬಂದಿದ್ದಾರೆ ಎಂದು ಆಕ್ಷೇಪಿಸಿದ್ದರು.

ಈ ಹಿನ್ನೆಲೆಯಲ್ಲಿ ಷೇರುದಾರರೆಲ್ಲಾ ಕೂಡಿ ಕೂರ್ಗಳ್ಳಿ ಗ್ರಾಮದ ಪುಟ್ಟ ಸೋಮಾಚಾರಿ ಅವರನ್ನು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.

ಇಲ್ಲಿ ಹಾಲು ಒಕ್ಕೂಟಕ್ಕೆ ಸರಬರಾಜು ಮಾಡುತ್ತಿರುವ ಪ್ರಾಮಾಣಿಕ ಜನರು ಕೇವಲ 52 ಜನರಷ್ಟೇ. ಆದರೆ ಅಕ್ರಮವಾಗಿ 284 ಸದಸ್ಯರನ್ನು ಮಾಡಿಕೊಂಡು ಚುನಾವಣೆ ನಡೆಸಿ ಜನತೆಗೆ ದ್ರೋಹ ಬಗೆಯಲಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದರಿಂದ ನೊಂದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಮತ್ತೆ ಒಂದು ವಾರದ ಗಡುವು ನೀಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕೂಡಲೇ ಚುನಾವಣೆ ಸಂಬಂಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ರಾಜೇಂದ್ರ, ವಾಸುಲಿಂಗೇಗೌಡ, ಪುಟ್ಟಣ್ಣ, ಪಟೇಲ್ ರಾಮಣ್ಣ, ಎನ್ ಕೃಷ್ಣಪ್ಪ, ಸಿದ್ದೇಗೌಡ, ಡಿ ರಾಮು, ಪಿಚ್ಛೆ ಗೌಡ್ರು ಕರಿಯಪ್ಪ, ಪಿಂಗಿ ರಾಮಣ್ಣ, ಅಂಕೆ ಗೌಡ ಅಣ್ಣಯ್ಯ, ಅಂಕೆಗೌಡ ರಾಮಪ್ಪ, ದೊಡ್ಡಟ್ಟಿ ಕೃಷ್ಣಪ್ಪ, ದೊಡ್ಡಟ್ಟಿ ನಾಗರಾಜ, ದೊಡ್ಡರವಿಕುಮಾರ್, ಮಹೇಶ್ ರಾಮಪ್ಪ, ಪುಟ್ಟಣ್ಣ, ಶಿವಪಾದು, ರವಿಕುಮಾರ್, ಪಿ, ಧನು, ಅಭಿ, ವಸಂತ್ ಕುಮಾರ್, ಬೈರೇಶ್, ಪ್ರಸನ್ನ, ಮಹಾಲಿಂಗಪ್ಪ, ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮುಖಂಡ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

17 mins ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

22 mins ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

1 hour ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

1 hour ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

1 hour ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago