ಮೈಸೂರು

ಕೂರ್ಗಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಪುಟ್ಟ ಸೋಮಾಚಾರಿ ಅವಿರೋಧ ಆಯ್ಕೆ

ಮೈಸೂರು: ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಮಸ್ಥರು ಒಟ್ಟಾಗಿ ಸೇರಿ ಪುಟ್ಟ ಸೋಮಾಚಾರಿ ಎಂಬುವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ನಡೆದ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿತ್ತು.

ಚುನಾವಣೆಯು ಕ್ರಮವಾಗಿ ನಡೆದಿಲ್ಲ. ನೀತಿ ನಿಬಂಧನೆಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಷೇರುದಾರರು ಆರೋಪಿಸಿದ್ದರು.

ಕಳೆದ 23 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಅಧ್ಯಕ್ಷರಾಗಿ ನಾಗೇಂದ್ರ ಮತ್ತು ಕಾರ್ಯದರ್ಶಿಯಾಗಿ ಸೀತಾರಾಮ್‌ ಅವರೇ ಮುಂದುವರಿದುಕೊಂಡು ಬಂದಿದ್ದಾರೆ ಎಂದು ಆಕ್ಷೇಪಿಸಿದ್ದರು.

ಈ ಹಿನ್ನೆಲೆಯಲ್ಲಿ ಷೇರುದಾರರೆಲ್ಲಾ ಕೂಡಿ ಕೂರ್ಗಳ್ಳಿ ಗ್ರಾಮದ ಪುಟ್ಟ ಸೋಮಾಚಾರಿ ಅವರನ್ನು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.

ಇಲ್ಲಿ ಹಾಲು ಒಕ್ಕೂಟಕ್ಕೆ ಸರಬರಾಜು ಮಾಡುತ್ತಿರುವ ಪ್ರಾಮಾಣಿಕ ಜನರು ಕೇವಲ 52 ಜನರಷ್ಟೇ. ಆದರೆ ಅಕ್ರಮವಾಗಿ 284 ಸದಸ್ಯರನ್ನು ಮಾಡಿಕೊಂಡು ಚುನಾವಣೆ ನಡೆಸಿ ಜನತೆಗೆ ದ್ರೋಹ ಬಗೆಯಲಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದರಿಂದ ನೊಂದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಮತ್ತೆ ಒಂದು ವಾರದ ಗಡುವು ನೀಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕೂಡಲೇ ಚುನಾವಣೆ ಸಂಬಂಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ರಾಜೇಂದ್ರ, ವಾಸುಲಿಂಗೇಗೌಡ, ಪುಟ್ಟಣ್ಣ, ಪಟೇಲ್ ರಾಮಣ್ಣ, ಎನ್ ಕೃಷ್ಣಪ್ಪ, ಸಿದ್ದೇಗೌಡ, ಡಿ ರಾಮು, ಪಿಚ್ಛೆ ಗೌಡ್ರು ಕರಿಯಪ್ಪ, ಪಿಂಗಿ ರಾಮಣ್ಣ, ಅಂಕೆ ಗೌಡ ಅಣ್ಣಯ್ಯ, ಅಂಕೆಗೌಡ ರಾಮಪ್ಪ, ದೊಡ್ಡಟ್ಟಿ ಕೃಷ್ಣಪ್ಪ, ದೊಡ್ಡಟ್ಟಿ ನಾಗರಾಜ, ದೊಡ್ಡರವಿಕುಮಾರ್, ಮಹೇಶ್ ರಾಮಪ್ಪ, ಪುಟ್ಟಣ್ಣ, ಶಿವಪಾದು, ರವಿಕುಮಾರ್, ಪಿ, ಧನು, ಅಭಿ, ವಸಂತ್ ಕುಮಾರ್, ಬೈರೇಶ್, ಪ್ರಸನ್ನ, ಮಹಾಲಿಂಗಪ್ಪ, ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮುಖಂಡ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

49 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

59 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

2 hours ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

3 hours ago