ಮೈಸೂರು

ನಂದಿನಿ ತುಪ್ಪದ ಬ್ರ್ಯಾಂಡ್‌ ರಕ್ಷಣೆಗೆ ʼಕ್ಯೂಆರ್‌ʼ ಕೋಡ್‌

ಮೈಸೂರು : ಮಾರುಕಟ್ಟೆಯಲ್ಲಿ ನಂದಿನಿ ತುಪ್ಪದ ಬ್ರ್ಯಾಂಡ್‌ ರಕ್ಷಣೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕ್ಯೂ ಆರ್‌ ಕೋಡ್‌ ಇರುವ ನಂದಿನಿ ತುಪ್ಪ ಪ್ಯಾಕೆಟ್‌ನ್ನು ಪರಿಚಯಿಸಿದೆ.

ನಂದಿನಿ ಬ್ರಾಂಡ್‌ನ ನೂತನ ವಿನ್ಯಾಸದ ೫೦೦ ಎಂಎಲ್ ಹಾಗೂ ೧ ಲೀ ತುಪ್ಪದ ಪ್ಯಾಕೆಟ್‌ನ್ನು ಗುರುವಾರ ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಬಿಡುಗಡೆ ಮಾಡಿದರು.

ಗುರುವಾರ ನಗರದ ಸಿದ್ದಾರ್ಥನಗರದಲ್ಲಿರುವ ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಗಳ ಕಛೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದ ನಂತರ ಮಾತನಾಡಿದ ಅವರು, ನಂದಿನಿ ತುಪ್ಪಕ್ಕೆ ಬಹಳ ಬೇಡಿಕೆ ಇದೆ. ಹೀಗಾಗಿ ನಕಲು ಆಗುವ ಸಾಧ್ಯತೆ ಕೂಡ ಇದೆ. ಆದ್ದರಿಂದ ನೂತನ ನಂದಿನಿ ತುಪ್ಪದ ಪ್ಯಾಕೆಟ್‌ನ ಮೇಲೆ ಹಾಲೋಗ್ರಾಮ್ ಮುದ್ರಿಸಲಾಗಿದ್ದು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದರು.

ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ಸಿಗುತ್ತೆ ಮಾಹಿತಿ:- ಇದರಿಂದ ತುಪ್ಪವನ್ನು ನಕಲು ಮಾಡಲು ಅವಕಾಶವಿರುವುದಿಲ್ಲ. ತುಪ್ಪದ ಪ್ಯಾಕೆಟ್‌ನಲ್ಲಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ತುಪ್ಪದ ಪ್ಯಾಕೆಟ್ ಬ್ಯಾಚ್ ನಂಬರ್, ತಯಾರಿಸಿದ ದಿನಾಂಕ ಹಾಗೂ ಯಾವ ದಿನಾಂಕದವರೆಗೆ ಬಳಸಬಹುದು ಎಂಬುದರ ಮಾಹಿತಿ ಸಿಗಲಿದೆ ಎಂದರು.

೫೦೦ ಎಂ.ಎಲ್ ಮತ್ತು ೧ ಲೀ ಪ್ಯಾಕೆಟ್‌ನ್ನು ನವೀಕರಿಸಿ ಬಿಡುಗಡೆ ಮಾಡಿದ್ದು, ತುಪ್ಪದ ಗುಣಮಟ್ಟ ಮತ್ತು ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿರುವುದಿಲ್ಲ. ಎಂದಿನಂತೆ ಅದೆ ಸ್ವಾದ ಹಾಗೂ ಪೌಷ್ಟಿಕಯುಕ್ತ ತುಪ್ಪವನ್ನು ಗ್ರಾಹಕರು ಸವಿಯಬಹುದಾಗಿರುತ್ತದೆ ಎಂದು ಹೇಳಿದರು.

೩ ಸಾವಿರ ಮೆಟ್ರಿಕ್ ಟನ್:- ಹಾಲು ಒಕ್ಕೂಟದ ಎಲ್ಲಾ ಮಂಡಳಗಳ ಮೂಲಕ ಪ್ರತೀ ದಿನ ೩ ಸಾವಿರ ಮೆಟ್ರಿಕ್ ಟನ್ ತುಪ್ಪವನ್ನು ಪ್ರತಿದಿನ ಉತ್ಪಾದಿಸಲಾಗುತ್ತಿದೆ. ಹೆಚ್ಚು ಬೇಡಿಕೆ ಇರುವ ಕಾರಣ ಅಷ್ಟೂ ತುಪ್ಪ ಮಾರಾಟವಾಗುತ್ತಿದೆ ಎಂದರು.

ತಿರುಪತಿಗೆ ತುಪ್ಪ:- ತಿರುಪತಿಯಲ್ಲಿ ಲಡ್ಡು ಹಾಗೂ ಇನ್ನಿತರ ತಿನಿಸುಗಳ ತಯಾರಿಕೆಗೆ ನಂದಿನಿ ತುಪ್ಪವನ್ನು ಬಳಸಲಾಗುತ್ತಿದೆ. ಇದೀಗ ತಿರುಪತಿಗೆ ೩ ಸಾವಿರ ಮೆಟ್ರಿಕ್ ಟನ್ ತುಪ್ಪ ಸರಬರಾಜಿಗೆ ಬೇಡಿಕೆ ಬಂದಿದೆ. ೨ ಸಾವಿರ ಮೆಟ್ರಿಕ್ ಟನ್ ತುಪ್ಪವನ್ನು ಸರಬರಾಜು ಮಾಡಲಾಗಿದೆ ಎಂದರು.

ಮುಜರಾಯಿ ಇಲಾಖೆಗೆ ಸರಬರಾಜು:- ರಾಜ್ಯದ ಪ್ರಮುಖ ದೇವಾಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಬಳಸಬೇಕು ಎಂಬ ಸರ್ಕಾರದ ಆದೇಶ ಪಾಲನೆಯಾಗುತ್ತಿದೆ. ಬಹುತೇಕ ಎಲ್ಲಾ ದೇವಾಲಯಗಳಿಗೆ ತುಪ್ಪ ಸರಬರಾಜು ಮಾಡಲಾಗುತ್ತಿದೆ ಎಂದರು.

ವಿದೇಶಕ್ಕೂ ತುಪ್ಪ:- ಕೇರಳ, ತಮಿಳುನಾಡು, ದಿಲ್ಲಿ ಸೇರಿದಂತೆ ಸಾಕಷ್ಟು ರಾಜ್ಯಗಳಿಗೆ ನಂದಿನಿ ಉತ್ಪನ್ನಗಳನ್ನು ಸರಬರಾಜು ಮಾಡಲಾಗುತ್ತಿದೆ. ಇದರ ಜೊತೆಗೆ ದುಬೈ, ಆಸ್ಟ್ರೇಲಿಯ, ಕೆನಡ ಸೇರಿದಂತೆ ೭ ರಾಷ್ಟ್ರಗಳಿಗೆ ನಂದಿನಿ ತುಪ್ಪ ಹಾಗೂ ಉತ್ಪನ್ನಗಳನ್ನು ಕಳುಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಹಾಮದ ಮಾರುಕಟ್ಟೆ ನಿರ್ದೇಶಕರುಗಳು ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ ಹಾಗೂ ಹಿರಿಯ ನಿರ್ದೇಶಕರುಗಳು ಮತ್ತು ಎಲ್ಲಾ ಹಾಲು ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

29 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

37 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

41 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

1 hour ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago