ಮೈಸೂರು

ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ ಸಿನಿಮಾಗಳು ಬಂದರೆ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗುತ್ತದೆ. ಆದ್ದರಿಂದ ಗುಣಮಟ್ಟದ ಚಿತ್ರಗಳನ್ನು ಕೊಡುವುದು ಅತ್ಯಗತ್ಯವಾಗಿದೆ ಎಂದರು.

ನಮ್ಮಲ್ಲಿ ಬಹಳ ಉತ್ತಮ ಸಿನಿಮಾಗಳು ಬಂದಿವೆ. ಅನೇಕ ಚಿತ್ರಗಳು ವರ್ಷಗಟ್ಟಲೇ ಪ್ರದರ್ಶನ ಕಂಡಿವೆ. ಗುಣಮಟ್ಟದ ಚಿತ್ರ ನೀಡುವ ಎಲ್ಲಾ ಚಿತ್ರರಂಗದವರಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ, ಇಂತಹ ಸಿನಿಮಾ ನೀಡುವವರಿಗೆ ಸರ್ಕಾರದಿಂದ ಸಹಾಯ- ಸಹಕಾರವನ್ನು ಮುಂದುವರೆಸಲಾಗುವುದು ಎಂದು ತಿಳಿಸಿದರು.

ಚಲನಚಿತ್ರ ಪ್ರೇಮಿಗಳಿಗೆ ಇದೊಂದು ಸುವರ್ಣ ಅವಕಾಶ. 7 ದಿನಗಳ ಕಾಲ ನಗರದ ಐನಾಕ್ಸ್ ಮತ್ತು ಡಿ ಆರ್ ಸಿ ಮಾಲ್ ನಲ್ಲಿ ಉತ್ತಮ ಚಲನ ಚಿತ್ರಗಳು ಪ್ರದರ್ಶನ ಆಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಕನ್ನಡದ ಖ್ಯಾತ ಹಾಸ್ಯನಟ ನರಸಿಂಹರಾಜು ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅವರಿಗೆ ಸನ್ಮಾನ ಮಾಡುವುದರ ಜೊತೆಗೆ ನರಸಿಂಹ ರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಇದೇ ಸಮಯದಲ್ಲಿ ಚಲನಚಿತ್ರೋತ್ಸವದ ವಿಶೇಷ ಮಾಹಿತಿಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಖ್ಯಾತ ಚಿತ್ರನಟ ಡಾರ್ಲಿಂಗ್ ಕೃಷ್ಣ,  ಮೈಸೂರಿನ ಚಲನಚಿತ್ರೋತ್ಸವ ದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ನನ್ನ ಊರು ಮೈಸೂರು ಆದಕಾರಣ ನನ್ನ ಕಲೆಗೆ ಮೈಸೂರು ಅತ್ಯುತ್ತಮ ವೇದಿಕೆಯನ್ನು ಮಾಡಿಕೊಟ್ಟಿತ್ತು. ನನಗಷ್ಟೇ ಅಲ್ಲದೆ ಹಲವು ಕಲೆಗಾರರಿಗೆ ಮೈಸೂರಿನ ದಸರಾ ಉಪಯುಕ್ತವಾಗಿದೆ ಹಾಗೂ ಸಿನಿಮಾಗಳು ಕೇವಲ ಮನರಂಜನೆ ಅಷ್ಟೇ ಅಲ್ಲದೆ ಸಮಾಜ ಉತ್ತಮ ಸಂದೇಶ ನೀಡುತ್ತಾ ಬಂದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಹಾಪೌರರಾದ ಶಿವಕುಮಾರ್, ಶಾಸಕರಾದ  ಡಾ.ತಿಮ್ಮಯ್ಯ, ಎ.ಅರ್.ಕೃಷ್ಣಮೂರ್ತಿ, ರವಿಶಂಕರ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಚಿತ್ರನಟ  ನಟಿಯರಾದ ಮಿಲನ ನಾಗರಾಜ್, ಸುಧಾ ನರಸಿಂಹರಾಜು,‌ ಮಾನ್ವಿತ ಕಾಮತ್ , ವೈಭವಿ ಶಾಂಡಿಲ್ಯ, ಮಯೂರಿ  ಸೇರಿದಂತೆ ಇತರರು ಹಾಜರಿದ್ದರು.

https://x.com/CMahadevappa/status/1713507285362942031?s=20

andolanait

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

48 mins ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

53 mins ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

13 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago