ಮೈಸೂರು

ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ ಸಿನಿಮಾಗಳು ಬಂದರೆ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗುತ್ತದೆ. ಆದ್ದರಿಂದ ಗುಣಮಟ್ಟದ ಚಿತ್ರಗಳನ್ನು ಕೊಡುವುದು ಅತ್ಯಗತ್ಯವಾಗಿದೆ ಎಂದರು.

ನಮ್ಮಲ್ಲಿ ಬಹಳ ಉತ್ತಮ ಸಿನಿಮಾಗಳು ಬಂದಿವೆ. ಅನೇಕ ಚಿತ್ರಗಳು ವರ್ಷಗಟ್ಟಲೇ ಪ್ರದರ್ಶನ ಕಂಡಿವೆ. ಗುಣಮಟ್ಟದ ಚಿತ್ರ ನೀಡುವ ಎಲ್ಲಾ ಚಿತ್ರರಂಗದವರಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ, ಇಂತಹ ಸಿನಿಮಾ ನೀಡುವವರಿಗೆ ಸರ್ಕಾರದಿಂದ ಸಹಾಯ- ಸಹಕಾರವನ್ನು ಮುಂದುವರೆಸಲಾಗುವುದು ಎಂದು ತಿಳಿಸಿದರು.

ಚಲನಚಿತ್ರ ಪ್ರೇಮಿಗಳಿಗೆ ಇದೊಂದು ಸುವರ್ಣ ಅವಕಾಶ. 7 ದಿನಗಳ ಕಾಲ ನಗರದ ಐನಾಕ್ಸ್ ಮತ್ತು ಡಿ ಆರ್ ಸಿ ಮಾಲ್ ನಲ್ಲಿ ಉತ್ತಮ ಚಲನ ಚಿತ್ರಗಳು ಪ್ರದರ್ಶನ ಆಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಕನ್ನಡದ ಖ್ಯಾತ ಹಾಸ್ಯನಟ ನರಸಿಂಹರಾಜು ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅವರಿಗೆ ಸನ್ಮಾನ ಮಾಡುವುದರ ಜೊತೆಗೆ ನರಸಿಂಹ ರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಇದೇ ಸಮಯದಲ್ಲಿ ಚಲನಚಿತ್ರೋತ್ಸವದ ವಿಶೇಷ ಮಾಹಿತಿಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಖ್ಯಾತ ಚಿತ್ರನಟ ಡಾರ್ಲಿಂಗ್ ಕೃಷ್ಣ,  ಮೈಸೂರಿನ ಚಲನಚಿತ್ರೋತ್ಸವ ದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ನನ್ನ ಊರು ಮೈಸೂರು ಆದಕಾರಣ ನನ್ನ ಕಲೆಗೆ ಮೈಸೂರು ಅತ್ಯುತ್ತಮ ವೇದಿಕೆಯನ್ನು ಮಾಡಿಕೊಟ್ಟಿತ್ತು. ನನಗಷ್ಟೇ ಅಲ್ಲದೆ ಹಲವು ಕಲೆಗಾರರಿಗೆ ಮೈಸೂರಿನ ದಸರಾ ಉಪಯುಕ್ತವಾಗಿದೆ ಹಾಗೂ ಸಿನಿಮಾಗಳು ಕೇವಲ ಮನರಂಜನೆ ಅಷ್ಟೇ ಅಲ್ಲದೆ ಸಮಾಜ ಉತ್ತಮ ಸಂದೇಶ ನೀಡುತ್ತಾ ಬಂದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಹಾಪೌರರಾದ ಶಿವಕುಮಾರ್, ಶಾಸಕರಾದ  ಡಾ.ತಿಮ್ಮಯ್ಯ, ಎ.ಅರ್.ಕೃಷ್ಣಮೂರ್ತಿ, ರವಿಶಂಕರ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಚಿತ್ರನಟ  ನಟಿಯರಾದ ಮಿಲನ ನಾಗರಾಜ್, ಸುಧಾ ನರಸಿಂಹರಾಜು,‌ ಮಾನ್ವಿತ ಕಾಮತ್ , ವೈಭವಿ ಶಾಂಡಿಲ್ಯ, ಮಯೂರಿ  ಸೇರಿದಂತೆ ಇತರರು ಹಾಜರಿದ್ದರು.

https://x.com/CMahadevappa/status/1713507285362942031?s=20

andolanait

Recent Posts

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

22 mins ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

50 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

1 hour ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

5 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

5 hours ago