ಮೈಸೂರು

ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ ಸಿನಿಮಾಗಳು ಬಂದರೆ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗುತ್ತದೆ. ಆದ್ದರಿಂದ ಗುಣಮಟ್ಟದ ಚಿತ್ರಗಳನ್ನು ಕೊಡುವುದು ಅತ್ಯಗತ್ಯವಾಗಿದೆ ಎಂದರು.

ನಮ್ಮಲ್ಲಿ ಬಹಳ ಉತ್ತಮ ಸಿನಿಮಾಗಳು ಬಂದಿವೆ. ಅನೇಕ ಚಿತ್ರಗಳು ವರ್ಷಗಟ್ಟಲೇ ಪ್ರದರ್ಶನ ಕಂಡಿವೆ. ಗುಣಮಟ್ಟದ ಚಿತ್ರ ನೀಡುವ ಎಲ್ಲಾ ಚಿತ್ರರಂಗದವರಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ, ಇಂತಹ ಸಿನಿಮಾ ನೀಡುವವರಿಗೆ ಸರ್ಕಾರದಿಂದ ಸಹಾಯ- ಸಹಕಾರವನ್ನು ಮುಂದುವರೆಸಲಾಗುವುದು ಎಂದು ತಿಳಿಸಿದರು.

ಚಲನಚಿತ್ರ ಪ್ರೇಮಿಗಳಿಗೆ ಇದೊಂದು ಸುವರ್ಣ ಅವಕಾಶ. 7 ದಿನಗಳ ಕಾಲ ನಗರದ ಐನಾಕ್ಸ್ ಮತ್ತು ಡಿ ಆರ್ ಸಿ ಮಾಲ್ ನಲ್ಲಿ ಉತ್ತಮ ಚಲನ ಚಿತ್ರಗಳು ಪ್ರದರ್ಶನ ಆಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಕನ್ನಡದ ಖ್ಯಾತ ಹಾಸ್ಯನಟ ನರಸಿಂಹರಾಜು ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅವರಿಗೆ ಸನ್ಮಾನ ಮಾಡುವುದರ ಜೊತೆಗೆ ನರಸಿಂಹ ರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಇದೇ ಸಮಯದಲ್ಲಿ ಚಲನಚಿತ್ರೋತ್ಸವದ ವಿಶೇಷ ಮಾಹಿತಿಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಖ್ಯಾತ ಚಿತ್ರನಟ ಡಾರ್ಲಿಂಗ್ ಕೃಷ್ಣ,  ಮೈಸೂರಿನ ಚಲನಚಿತ್ರೋತ್ಸವ ದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ನನ್ನ ಊರು ಮೈಸೂರು ಆದಕಾರಣ ನನ್ನ ಕಲೆಗೆ ಮೈಸೂರು ಅತ್ಯುತ್ತಮ ವೇದಿಕೆಯನ್ನು ಮಾಡಿಕೊಟ್ಟಿತ್ತು. ನನಗಷ್ಟೇ ಅಲ್ಲದೆ ಹಲವು ಕಲೆಗಾರರಿಗೆ ಮೈಸೂರಿನ ದಸರಾ ಉಪಯುಕ್ತವಾಗಿದೆ ಹಾಗೂ ಸಿನಿಮಾಗಳು ಕೇವಲ ಮನರಂಜನೆ ಅಷ್ಟೇ ಅಲ್ಲದೆ ಸಮಾಜ ಉತ್ತಮ ಸಂದೇಶ ನೀಡುತ್ತಾ ಬಂದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಹಾಪೌರರಾದ ಶಿವಕುಮಾರ್, ಶಾಸಕರಾದ  ಡಾ.ತಿಮ್ಮಯ್ಯ, ಎ.ಅರ್.ಕೃಷ್ಣಮೂರ್ತಿ, ರವಿಶಂಕರ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಚಿತ್ರನಟ  ನಟಿಯರಾದ ಮಿಲನ ನಾಗರಾಜ್, ಸುಧಾ ನರಸಿಂಹರಾಜು,‌ ಮಾನ್ವಿತ ಕಾಮತ್ , ವೈಭವಿ ಶಾಂಡಿಲ್ಯ, ಮಯೂರಿ  ಸೇರಿದಂತೆ ಇತರರು ಹಾಜರಿದ್ದರು.

https://x.com/CMahadevappa/status/1713507285362942031?s=20

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

5 hours ago