ಮೈಸೂರು

ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ ಸಿನಿಮಾಗಳು ಬಂದರೆ ಸಮಾಜಕ್ಕೆ ಹೆಚ್ಚು ಉಪಯುಕ್ತವಾಗುತ್ತದೆ. ಆದ್ದರಿಂದ ಗುಣಮಟ್ಟದ ಚಿತ್ರಗಳನ್ನು ಕೊಡುವುದು ಅತ್ಯಗತ್ಯವಾಗಿದೆ ಎಂದರು.

ನಮ್ಮಲ್ಲಿ ಬಹಳ ಉತ್ತಮ ಸಿನಿಮಾಗಳು ಬಂದಿವೆ. ಅನೇಕ ಚಿತ್ರಗಳು ವರ್ಷಗಟ್ಟಲೇ ಪ್ರದರ್ಶನ ಕಂಡಿವೆ. ಗುಣಮಟ್ಟದ ಚಿತ್ರ ನೀಡುವ ಎಲ್ಲಾ ಚಿತ್ರರಂಗದವರಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ, ಇಂತಹ ಸಿನಿಮಾ ನೀಡುವವರಿಗೆ ಸರ್ಕಾರದಿಂದ ಸಹಾಯ- ಸಹಕಾರವನ್ನು ಮುಂದುವರೆಸಲಾಗುವುದು ಎಂದು ತಿಳಿಸಿದರು.

ಚಲನಚಿತ್ರ ಪ್ರೇಮಿಗಳಿಗೆ ಇದೊಂದು ಸುವರ್ಣ ಅವಕಾಶ. 7 ದಿನಗಳ ಕಾಲ ನಗರದ ಐನಾಕ್ಸ್ ಮತ್ತು ಡಿ ಆರ್ ಸಿ ಮಾಲ್ ನಲ್ಲಿ ಉತ್ತಮ ಚಲನ ಚಿತ್ರಗಳು ಪ್ರದರ್ಶನ ಆಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಕನ್ನಡದ ಖ್ಯಾತ ಹಾಸ್ಯನಟ ನರಸಿಂಹರಾಜು ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅವರಿಗೆ ಸನ್ಮಾನ ಮಾಡುವುದರ ಜೊತೆಗೆ ನರಸಿಂಹ ರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಇದೇ ಸಮಯದಲ್ಲಿ ಚಲನಚಿತ್ರೋತ್ಸವದ ವಿಶೇಷ ಮಾಹಿತಿಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಖ್ಯಾತ ಚಿತ್ರನಟ ಡಾರ್ಲಿಂಗ್ ಕೃಷ್ಣ,  ಮೈಸೂರಿನ ಚಲನಚಿತ್ರೋತ್ಸವ ದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ನನ್ನ ಊರು ಮೈಸೂರು ಆದಕಾರಣ ನನ್ನ ಕಲೆಗೆ ಮೈಸೂರು ಅತ್ಯುತ್ತಮ ವೇದಿಕೆಯನ್ನು ಮಾಡಿಕೊಟ್ಟಿತ್ತು. ನನಗಷ್ಟೇ ಅಲ್ಲದೆ ಹಲವು ಕಲೆಗಾರರಿಗೆ ಮೈಸೂರಿನ ದಸರಾ ಉಪಯುಕ್ತವಾಗಿದೆ ಹಾಗೂ ಸಿನಿಮಾಗಳು ಕೇವಲ ಮನರಂಜನೆ ಅಷ್ಟೇ ಅಲ್ಲದೆ ಸಮಾಜ ಉತ್ತಮ ಸಂದೇಶ ನೀಡುತ್ತಾ ಬಂದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಹಾಪೌರರಾದ ಶಿವಕುಮಾರ್, ಶಾಸಕರಾದ  ಡಾ.ತಿಮ್ಮಯ್ಯ, ಎ.ಅರ್.ಕೃಷ್ಣಮೂರ್ತಿ, ರವಿಶಂಕರ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಚಿತ್ರನಟ  ನಟಿಯರಾದ ಮಿಲನ ನಾಗರಾಜ್, ಸುಧಾ ನರಸಿಂಹರಾಜು,‌ ಮಾನ್ವಿತ ಕಾಮತ್ , ವೈಭವಿ ಶಾಂಡಿಲ್ಯ, ಮಯೂರಿ  ಸೇರಿದಂತೆ ಇತರರು ಹಾಜರಿದ್ದರು.

https://x.com/CMahadevappa/status/1713507285362942031?s=20

andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

10 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

13 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

15 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

15 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

15 hours ago