ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.
ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ ಮೃತ ಮಹಿಳೆ. 13 ವರ್ಷಗಳ ಹಿಂದೆ ಕಳಲೆ ಗ್ರಾಮದಿಂದ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ. ದಂಪತಿ ನಡುವೆ ದಾಂಪತ್ಯ ಕಲಹವಾಗಿ ಎರಡು ವರ್ಷಗಳಿಂದ ದೂರವಾಗಿದ್ದರು.
ರಾತ್ರಿ 10 ಗಂಟೆ ಸಮಯದಲ್ಲಿ ಮನೆಗೆ ಬಂದ ಪತಿ ಮಹೇಶ್ ಪತ್ನಿ ಸುಧಾ ನಡುವೆ ಜಗಳವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ರಿಪೀಸ್ ಪಟ್ಟಿಯಿಂದ ಪತ್ನಿಯ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿಯೇ ಪತ್ನಿ ಸುಧಾ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್.ಪಿ.ಮಲ್ಲಿಕಾರ್ಜುನ್ ಬಲದಂಡಿ, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಆನಂದ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಮಹೇಶ್ ಪರಾರಿಯಾಗಿದ್ದಾನೆ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…