ಮೈಸೂರು

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.

ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ ಮೃತ ಮಹಿಳೆ. 13 ವರ್ಷಗಳ ಹಿಂದೆ ಕಳಲೆ ಗ್ರಾಮದಿಂದ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ. ದಂಪತಿ ನಡುವೆ ದಾಂಪತ್ಯ ಕಲಹವಾಗಿ ಎರಡು ವರ್ಷಗಳಿಂದ ದೂರವಾಗಿದ್ದರು.

ರಾತ್ರಿ 10 ಗಂಟೆ ಸಮಯದಲ್ಲಿ ಮನೆಗೆ ಬಂದ ಪತಿ ಮಹೇಶ್ ಪತ್ನಿ ಸುಧಾ ನಡುವೆ ಜಗಳವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ರಿಪೀಸ್ ಪಟ್ಟಿಯಿಂದ ಪತ್ನಿಯ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿಯೇ ಪತ್ನಿ ಸುಧಾ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್.ಪಿ.ಮಲ್ಲಿಕಾರ್ಜುನ್ ಬಲದಂಡಿ, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಆನಂದ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಮಹೇಶ್ ಪರಾರಿಯಾಗಿದ್ದಾನೆ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago