ಮೈಸೂರು

ಮೋದಿ ಅವರಿಂದ ಸಾಲು ಸಾಲು ಅಭಿವೃದ್ಧಿ : ಆರ್.ಅಶೋಕ

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರ 10 ವರ್ಷಗಳ ಆಡಳಿತ ಹಾಗೂ ನರೇಂದ್ರ ಮೋದಿಯವರ 11 ವರ್ಷಗಳ ಆಡಳಿತಕ್ಕೆ ಹೋಲಿಸಿದರೆ, ನಾಲ್ಕು ಪಟ್ಟು ಅಧಿಕ ಅಭಿವೃದ್ಧಿಯಾಗಿದೆ. ಜಗತ್ತಿನಲ್ಲಿ ಆರ್ಥಿಕತೆಯಲ್ಲಿ ಭಾರತ 10-11 ನೇ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಮುಂದೆ ಅದನ್ನು ಮೂರನೇ ಸ್ಥಾನಕ್ಕೆ ಪ್ರಧಾನಿ ಮೋದಿ ಕೊಂಡೊಯ್ಯಲಿದ್ದಾರೆ. ಇಂದಿರಾಗಾಂಧಿ ಕಾಲದಲ್ಲಿ ಗೋದಿಗೆ ಬೇರೆ ದೇಶದ ಮುಂದೆ ಕೈಯೊಡ್ಡುವ ಪರಿಸ್ಥಿತಿ ಇತ್ತು. ಪ್ರಧಾನಿ ಮೋದಿ ಕಾಲದಲ್ಲಿ 100 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದರು.

ಯುಪಿಎ ಕಾಲದಲ್ಲಿ ತಲಾ ಆದಾಯ 6,000 ರೂ. ಇದ್ದರೆ, ಈಗ 20,000 ರೂ. ಆಗಿದೆ. ಆಗ ಗ್ಯಾಸ್‌ ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಇದ್ದರೆ, ಈಗ 500 ರೂ. ಇದೆ. ಸಬ್ಸಿಡಿ ರಹಿತ ದರ ಆಗ 1,250 ರೂ. ಇದ್ದರೆ, ಈಗ 850 ರೂ. ಇದೆ. ಯುಪಿಎ ಹತ್ತು ವರ್ಷದಲ್ಲಿ 9 ಸಾವಿರಕ್ಕೂ ಅಧಿಕ ಉಗ್ರ ದಾಳಿಯಾಗಿತ್ತು. ಈಗ ಪ್ರತಿ ದಾಳಿ ನಡೆಯುತ್ತಿದೆ. ಮುಂಬೈಯಲ್ಲಿ ದಾಳಿಯಾದಾಗ ಅದಕ್ಕೆ ಪ್ರತ್ಯುತ್ತರ ನೀಡಲೇ ಇಲ್ಲ. ಪಹಲ್ಗಾಮ್‌ನಲ್ಲಿ ದಾಳಿಯಾದಾಗ ಕೂಡಲೇ ಉಗ್ರರ ತಾಣಗಳನ್ನು ನಮ್ಮ ಯೋಧರು ಧ್ವಂಸ ಮಾಡಿದ್ದಾರೆ ಎಂದರು.

ಹಿಂದೆ 387 ಮೆಡಿಕಲ್‌ ಕಾಲೇಜುಗಳಿದ್ದು, ಈಗ 704 ಮೆಡಿಕಲ್‌ ಕಾಲೇಜುಗಳಿವೆ. ಆಗ 74 ವಿಮಾನ ನಿಲ್ದಾಣಗಳಿದ್ದು, ಈಗ 149 ಆಗಿದೆ. ಆಗ ರಾಷ್ಟ್ರೀಯ ಹೆದ್ದಾರಿ 91,000 ಕಿ.ಮೀ. ಇದ್ದಿದ್ದು, ಈಗ 1.45 ಲಕ್ಷ ಕಿ.ಮೀ. ಆಗಿದೆ. 7 ಏಮ್ಸ್‌ ಇದ್ದಿದ್ದು, 22 ಆಗಿದೆ. 82,000 ಮೆಡಿಕಲ್‌ ಸೀಟುಗಳಿದ್ದಿದ್ದು, ಈಗ 1.50 ಲಕ್ಷ ಆಗಿದೆ. ಆಗ ದೇಶದ ಬಜೆಟ್‌ 17 ಲಕ್ಷ ಕೋಟಿ ರೂ. ಇದ್ದರೆ, ಈಗ 50.65 ಲಕ್ಷ ಕೋಟಿ ರೂ. ಆಗಿದೆ. ಎಲ್‌ಇಡಿ ಬಲ್ಬ್‌ಗೆ ಆಗ 450 ರೂ. ಇದ್ದಿದ್ದು, ಈಗ 70 ರೂ. ಗೆ ಸಿಗುತ್ತಿದೆ ಎಂದರು.

ಮೊದಲು ಬೇರೆ ದೇಶದಲ್ಲಿ ಬುಲೆಟ್‌ ರೈಲು ನೋಡುತ್ತಿದ್ದೆವು. ಈಗ ನಮ್ಮ ದೇಶದಲ್ಲೇ 60% ಕಾಮಗಾರಿ ಮುಗಿದು ಮುಂದೆ ಬುಲೆಟ್‌ ರೈಲು ಬರಲಿದೆ. ಕೃಷಿಗೆ ಮೊದಲು 30,000 ಕೋಟಿ ರೂ.ಸಬ್ಸಿಡಿ ಸಿಗುತ್ತಿದ್ದರೆ, ಈಗ 1.27 ಲಕ್ಷ ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಆಗ 14 ಕೋಟಿ ಅಡುಗೆ ಅನಿಲ ಸಂಪರ್ಕವಿದ್ದರೆ, ಈಗ 31 ಕೋಟಿ ಆಗಿದೆ. ಹನ್ನೊಂದು ವರ್ಷಗಳಲ್ಲಿ 4 ಕೋಟಿ ಮನೆ, 11 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 27 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ಎಂದಿಗೂ ನಕ್ಸಲ್‌ ಪರವಾಗಿದ್ದರು. ಈಗ ನಕ್ಸಲ್‌ ಚಳವಳಿಯನ್ನು ಸಂಪೂರ್ಣವಾಗಿ ಮಟ್ಟಹಾಕುವ ಗುರಿ ಇರಿಸಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲೂ ದೊಡ್ಡ ಅಭಿವೃದ್ಧಿ ಕೆಲಸಗಳಾಗಿವೆ. ಜಮ್ಮು-ಕಾಶ್ಮೀರವನ್ನು ಬಿಟ್ಟುಬಿಡೋಣ ಎಂಬ ಮನಸ್ಥಿತಿ ಇತ್ತು. ವಿಶೇಷ ಸ್ಥಾನಮಾನ ರದ್ದಾದ ಬಳಿಕ ಅಲ್ಲಿ ಅಭಿವೃದ್ಧಿ ಹೆಚ್ಚಿದೆ. ಪ್ರವಾಸೋದ್ಯಮದಿಂದ ಅಲ್ಲಿನ ಜನರ ಆದಾಯ ಅಧಿಕವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

6 mins ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

6 mins ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

50 mins ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

1 hour ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

1 hour ago

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

3 hours ago