ಮೈಸೂರು

ಆರ್‌ ಟಿ ಓ ಸೇವೆ: ಆನ್‌ಲೈನ್ ಸೆಂಟರ್‌ಗಳಿಂದ ಸುಲಿಗೆ

 

ಎಚ್. ಎಸ್.‌ ದಿನೇಶ್ ಕುಮಾರ್
ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, ಆನ್‌ಲೈನ್ ಸೆಂಟರ್ ನಡೆಸುವವರು ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದ್ದಾರೆ.

ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುವ ಸರ್ಕಾರಿ ಕಚೇರಿಗಳಲ್ಲಿ ಸಾರಿಗೆ ಇಲಾಖೆಯೂ ಒಂದು. ವಾಹನ ಚಾಲನಾ ಪರವಾನಗಿ, ಚಾಲನಾ ಪರವಾನಗಿ ನವೀಕರಣ, ಎಲ್‌ಎಲ್‌ಆರ್ ಹೀಗೆ ವಾಹನ ಚಾಲನೆಗೆ ಸಂಬಂಧಿಸಿದ ಹಲವಾರು ಕೆಲಸಗಳಿಗಾಗಿ ಸಾರ್ವಜನಿಕರು ಪ್ರತಿನಿತ್ಯ ಸಾರಿಗೆ ಇಲಾಖೆಗೆ ಎಡತಾಕುತ್ತಾರೆ. ಈ ಹಿಂದೆ ಆರ್‌ಟಿಒ ಕಚೇರಿಗೆ ಆಗಮಿಸುತ್ತಿದ್ದ ಬಹುತೇಕರು ತಮ್ಮ ಕೆಲಸಗಳಿಗಾಗಿ ಮಧ್ಯವರ್ತಿಗಳನ್ನು ಅವಲಂಬಿಸುತ್ತಿದ್ದರು.

ಅರ್ಜಿ ತುಂಬಿಸಲು ಹಾಗೂ ಆರ್‌ಟಿಒ ಕಚೇರಿಗಳಲ್ಲಿ ಆಗಬೇಕಾದ ಕೆಲಸಗಳನ್ನು ಅವರ ಮೂಲಕವೇ ಮಾಡಿಸುತ್ತ್ತಿದ್ದರು.
ಅರ್ಜಿ ತುಂಬಿಸಲು ಅವರು ಮಧ್ಯವರ್ತಿಗಳಿಗೆ 30 ರೂ.ನಿಂದ 50 ರೂ. ವರೆಗೆ ಮಾತ್ರ ಹಣ ನೀಡುತ್ತಿದ್ದರು. ಮಧ್ಯವರ್ತಿಗಳು ಹಣ ಪಡೆಯುವ ಬಗ್ಗೆ ಆಗಾಗ್ಗೆ ದೂರುಗಳು ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರಿಗೆ ಇಲಾಖೆಯಲ್ಲಿ ಆನ್‌ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದಿತು.

ಜನೋಪಯೋಗಿಯಾಗಬೇಕಾಗಿದ್ದ ಈ ಯೋಜನೆ ಇದೀಗ ಕೆಲವರು ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ಸಾರಿಗೆ ಕಚೇರಿಗಳ ಸುತ್ತಮುತ್ತ ಇರುವ ಆನ್‌ಲೈನ್ ಸೆಂಟರ್‌ಗಳ ಮಾಲೀಕರು ಸಾರ್ವಜನಿಕರಿಂದ ಸುಲಿಗೆ ಆರಂಭಿಸಿವೆ. ಆದರೆ, ಅವರನ್ನು ಅಂಕೆಯಲ್ಲಿಡಲು ಯಾರಿಗೂ ಅಧಿಕಾರವಿಲ್ಲ.

        ದ್ವಿಚಕ್ರ ವಾಹನದ ಎಲ್‌ಎಲ್‌ಆರ್ ಪಡೆಯಬೇಕಾದಲ್ಲಿ ಸಾರಿಗೆ ಇಲಾಖೆ ನಿಗಧಿಪಡಿಸಿರುವ ಮೊತ್ತ 150 ರೂ. ಹಾಗೂ ಆನ್‌ಲೈನ್ ಪರೀಕ್ಷೆಗೆಂದು 50ರೂ. ನಿಗಧಿಪಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ತುಂಬಿಸಿ ಹಣ ಪಾವತಿಸಿದಲ್ಲಿ ಸಂಜೆಯ ವೇಳೆಗೆ ಅರ್ಜಿ ಹಾಕಿದ ಸ್ಥಳದಲ್ಲಿಯೇ  ಎಲ್‌ಎಲ್‌ಆರ್ ಪಡೆಯುವ ವ್ಯವಸ್ಥೆ ಇದೆ.

ಆದರೆ, ಎಲ್‌ಎಲ್‌ಆರ್ ಮಾಡಿಕೊಡಲು ಆನ್‌ಲೈನ್ ಸೆಂಟರ್‌ಗಳು ಪಡೆಯುತ್ತಿರುವ ಹಣ 700 ರೂ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 100ರೂ. ಪರೀಕ್ಷೆ ತೆಗೆದುಕೊಳ್ಳಲು200ರೂ. ಸಾರಿಗೆ ಇಲಾಖೆಯ ಶುಲ್ಕ200 ರೂ. ಹಾಗೂ ನಿಮ್ಮ ಅರ್ಜಿ ಸ್ವೀಕಾರವಾಗಬೇಕಾದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗೆ 200 ರೂ. ಕೊಡಬೇಕು ಎಂದು ಹೇಳಿ ಹಣವನ್ನು ವಸೂಲು ಮಾಡುತ್ತಿದ್ದಾರೆ.

ಪರೀಕ್ಷೆ ಎದುರಿಸುವುದಿಲ್ಲ: ಈ ಹಿಂದೆ ಎಲ್‌ಎಲ್‌ಆರ್ ಪರೀಕ್ಷೆಯನ್ನು ಸಾರಿಗೆ ಇಲಾಖೆ ಕಚೇರಿಯ ಅಧಿಕಾರಿಗಳ ಸಮ್ಮುಖದಲ್ಲಿಯೇ  ಅಭ್ಯರ್ಥಿಗಳು ಎದುರಿಸುತ್ತಿದ್ದರು. 15 ಅಂಕಗಳನ್ನು ಪಡೆದರೆ ಮಾತ್ರ ಎಲ್‌ಎಲ್‌ಆರ್ ಪಡೆಯಲು ಅರ್ಹರಾಗುತ್ತಿದ್ದರು. ಆದರೀಗ ಆನ್‌ಲೈನ್ ಸೆಂಟರ್‌ಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸುತ್ತಿಲ್ಲ. ಪರೀಕ್ಷೆಗೆಂದು 200 ರೂ. ಪಡೆಯುತ್ತಿರುವ ಆನ್‌ಲೈನ್ ಸೆಂಟರ್ ಮಾಲೀಕರು ತಮ್ಮ ಆಪರೇಟರ್‌ಗಳ ಮೂಲಕವೇ ಪರೀಕ್ಷೆಯನ್ನು ಎದುರಿಸಿ ಅಭ್ಯರ್ಥಿಗಳನ್ನು ಪಾಸ್ ಮಾಡಿಸುತ್ತಿದ್ದಾರೆ.

ಅನರ್ಹರೂ ಪಡೆಯಬಹುದು: ಈ ಹಿಂದೆ ದೃಷ್ಟಿ ದೋಷ, ಅಂಗವಿಕಲತೆಯನ್ನು ಹೊಂದಿರುವವರು ಎಲ್‌ಎಲ್‌ಆರ್ ಅಥವಾ ಡಿಎಲ್‌ಗೆ ಅರ್ಜಿ ಸಲ್ಲಿಸಿದಲ್ಲಿ ಅಂತಹವರನ್ನು ಮುಖತಃ ಭೇಟಿ ಮಾಡುತ್ತಿದ್ದ ಅಧಿಕಾರಿಗಳು ಅಂತಹ ಅರ್ಜಿಯನ್ನು ತಿರಸ್ಕರಿಸುತ್ತಿದ್ದರು. ಆದರೀಗ ಅನರ್ಹರೂ ಎಲ್‌ಎಲ್‌ಆರ್ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆನ್‌ಲೈನ್ ಸೆಂಟರ್‌ಗಳ ಸುಲಿಗೆಗೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಆನ್‌ಲೈನ್ ಸೆಂಟರ್‌ನವರು ವಸೂಲಿ ಮಾಡುವ ಹಣ
* ಎಲ್‌ಎಲ್‌ಆರ್ ಮಾಡಿಕೊಡಲು 700 ರೂ.
* ಆನ್‌ಲೈನ್ ಮೂಲಕ ಅರ್ಜಿ ಹಾಕಲು100 ರೂ.
* ಪರೀಕ್ಷೆ ತೆಗೆದುಕೊಳ್ಳಲು 200 ರೂ.
* ಸಾರಿಗೆ ಇಲಾಖೆಯ ಶುಲ್ಕ200 ರೂ.
* ಸಾರಿಗೆ ಇಲಾಖೆಯ ಅಧಿಕಾರಿಗೆ200 ರೂ.

 

ಸಾರಿಗೆ ಕಚೇರಿಯ ಆವರಣದಲ್ಲಿಯೇ ಆನ್‌ಲೈನ್ ಸೆಂಟರ್ ತೆರೆಯಬೇಕು. ಅರ್ಜಿ ಸಲ್ಲಿಸಲು ಇಂತಿಷ್ಟು ಹಣವನ್ನು ಸರ್ಕಾರವೇ ನಿಗದಿಪಡಿಸಬೇಕು. ಇದರಿಂದ ಸರ್ಕಾರಕ್ಕೂ ಹಣ ಬರುತ್ತದೆ ಮತ್ತು ಕೆಲವರಿಗೆ ಉದ್ಯೋಗ ನೀಡಿದಂತಾಗುತ್ತದೆ. ಈಗಾಗಲೇ ಹೊಸದಿಲ್ಲಿಯಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ.
     –ಎಂ.ಎಸ್.ಧನಂಜಯ, ಬಿಜೆಪಿ ಮುಖಂಡರು.

ನಿಗದಿತ ಶುಲ್ಕದೊಡನೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳಿಗೆ ಆಯಾ ದಿನವೇ ಅನುಮೋದನೆ ನೀಡಲಾಗುತ್ತದೆ. ಇದಕ್ಕಾಗಿ ಯಾರೂ ಹೆಚ್ಚಿನ ಹಣ ನೀಡಬೇಕಾಗಿಲ್ಲ. ಸಾರಿಗೆ ಅಧಿಕಾರಿಗಳಿಗೆ ಹಣ ನಿಡಬೇಕು ಎಂದು ಯಾರಾದರೂ ಒತ್ತಾಯಿಸಿದರೆ ದೂರು ಸಲ್ಲಿಸಬಹುದು. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
     –ಭೀಮನಗೌಡ ಪಾಟೀಲ್, ಸಾರಿಗೆ ಅಧಿಕಾರಿ, ಮೈಸೂರು ಪೂರ್ವ.

andolana

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

20 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

21 hours ago