ಮೈಸೂರು

ಕಾಲ್ತುಳಿತಕ್ಕೆ ಪೊಲೀಸ್‌ ವೈಫಲ್ಯವೇ ಕಾರಣ : ರಾಜೇಶ್ ಆರೋಪಿ

ಮೈಸೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವವನ್ನು ವೀಕ್ಷಿಸಲು ಲಕ್ಷಾಂತರ ಜನರು ಸಾಗರೋಪಾದಿಯಲ್ಲಿ ಬರುತ್ತಿರುವುದು ಕಂಡುಬಂದರೂ ಕ್ರೀಡಾಂಗಣ ಆಡಳಿತ ಮಂಡಳಿ ಕ್ರೀಡಾಂಗಣದ ಎಲ್ಲಾ ದ್ವಾರಗಳನ್ನೂ ತೆರೆಯಲಿಲ್ಲ.

ಕೇವಲ ಎರಡು ದ್ವಾರಗಳನ್ನು ಮಾತ್ರ ತೆರೆಯಲಾಗಿತ್ತು. ಪೊಲೀಸ್ ಅಧಿಕಾರಿಗಳೂ ಎಲ್ಲ ದ್ವಾರಗಳನ್ನು ತೆರೆಯುವಂತೆ ಸೂಚಿಸಲಿಲ್ಲ. ಇದರ ಪರಿಣಾಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳ ಜಮಾವಣೆಯಾಗಿ ನೂಕು ನುಗ್ಗಲು ಉಂಟಾಗಿ 11 ಜನರು ಸಾವಿಗೀಡಾದರು ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪೊಲೀಸ್ ಇಲಾಖೆ ಮತ್ತು ಕ್ರೀಡಾಂಗಣ ಆಡಳಿತ ಮಂಡಳಿಯ ವೈಫಲ್ಯವನ್ನು ಮರೆಮಾಚಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಲೆಗೆ ಕಟ್ಟುವ ಮುಖಾಂತರ ಅವರನ್ನು ಖಳನಾಯಕರಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದರು. ಕಾಂಗ್ರೆಸ್ ಮುಖಂಡರಾದ ಸೈಯದ್ ಫರೂಖ್, ಎಸ್.ಎ.ರಹೀಂ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

12 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

13 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

13 hours ago