ಮೈಸೂರು: ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವವನ್ನು ವೀಕ್ಷಿಸಲು ಲಕ್ಷಾಂತರ ಜನರು ಸಾಗರೋಪಾದಿಯಲ್ಲಿ ಬರುತ್ತಿರುವುದು ಕಂಡುಬಂದರೂ ಕ್ರೀಡಾಂಗಣ ಆಡಳಿತ ಮಂಡಳಿ ಕ್ರೀಡಾಂಗಣದ ಎಲ್ಲಾ ದ್ವಾರಗಳನ್ನೂ ತೆರೆಯಲಿಲ್ಲ.
ಕೇವಲ ಎರಡು ದ್ವಾರಗಳನ್ನು ಮಾತ್ರ ತೆರೆಯಲಾಗಿತ್ತು. ಪೊಲೀಸ್ ಅಧಿಕಾರಿಗಳೂ ಎಲ್ಲ ದ್ವಾರಗಳನ್ನು ತೆರೆಯುವಂತೆ ಸೂಚಿಸಲಿಲ್ಲ. ಇದರ ಪರಿಣಾಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳ ಜಮಾವಣೆಯಾಗಿ ನೂಕು ನುಗ್ಗಲು ಉಂಟಾಗಿ 11 ಜನರು ಸಾವಿಗೀಡಾದರು ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪೊಲೀಸ್ ಇಲಾಖೆ ಮತ್ತು ಕ್ರೀಡಾಂಗಣ ಆಡಳಿತ ಮಂಡಳಿಯ ವೈಫಲ್ಯವನ್ನು ಮರೆಮಾಚಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಲೆಗೆ ಕಟ್ಟುವ ಮುಖಾಂತರ ಅವರನ್ನು ಖಳನಾಯಕರಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದರು. ಕಾಂಗ್ರೆಸ್ ಮುಖಂಡರಾದ ಸೈಯದ್ ಫರೂಖ್, ಎಸ್.ಎ.ರಹೀಂ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…