ಮೈಸೂರು

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ ಆದೇಶವನ್ನು ಪಾಲಿಸಲು ಮುಂದಾಗಿದೆ.
ಇಂದಿನಿಂದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ 21 ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ದುಬಾರೆ, ಮತ್ತಿಗೋಡು, ಆನೆ ಚೌಕಿಯಿಂದ 8 ಸಾಕಾನೆಗಳನ್ನು ಬಳಸಿ ಹಾಸನ ಜಿಲ್ಲೆಯ ಬೇಲೂರು, ಆಲೂರು ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರೊ ಕಾಡಾನೆ ಹಿಂಡಿನ ಚಲನವಲನ ವೀಕ್ಷಣೆಗಾಗಿ ರೇಡಿಯೋ ಕಾಲರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳೆಕಾರಣ ಹಾಗು ಸಾಕಾನೆಗಳು ದಸರಾಕ್ಕೆ ಹೋಗಿದ್ದ ಕಾರಣ ಕಾರ್ಯಾಚರಣೆ ತಡವಾಗಿತ್ತು. ಇಂದಿನಿಂದ ಗುಂಪಿನಲ್ಲಿರೊ ಹೆಣ್ಣಾನೆ ಹಾಗು ಒಂಟಿಯಾಗಿ ಓಡಾಡೊ ಸಲಗಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗುತ್ತಿದೆ.ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಗಜಪಡೆ ಉಪಟಳ ತಡೆಗೆ ಜನರು ಆಗ್ರಹಿಸಿದ್ರು, ಕಳೆದ ಒಂದು ತಿಂಗಳಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಅರೆಹಳ್ಕಿ ಭಾಗದಲ್ಲಿ ಆನೆಗಳ ದಾಂದಲೆ ಹೆಚ್ಚಿತ್ತು.ಕಾಡಾನೆಗಳು ಕಾಫಿ, ಬಾಳೆ, ಅಡಿಕೆ ಬೆಳೆ‌ನಾಶ ಮಾಡುತ್ತಿವೆ. ಗುಂಪು ಗುಂಪಾಗಿ ಓಡಾಡುತ್ತಾ, ಗ್ರಾಮಗಳ ಸನಿಹವೇ ಬಂದು ಜೀವ ಭಯ ಸೃಷ್ಟಿ ಮಾಡುತ್ತಿವೆ. ಆನೆಗಳ ಸಂಚಾರದಿಂದ ಜನರು ತಮ್ಮ‌ಕಾಫಿ ತೋಟಕ್ಕೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ಸಂಪೂರ್ಣ ಸ್ಥಳಾಂತರಕ್ಕೆ ಜನರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಕ್ರಮವಾಗಿ ರೇಡಿಯೋ ಕಾಲರಿಂಗ್ ಹಾಗೂ ಕೆಲ‌ ಪುಂಡಾನೆ ಸೆರೆ ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಡಿಸಿಎಫ್ ಮೋಹನ್ ಕುಮಾರ್, ಹಾಸನ ಎಸಿಎಫ್ ಪ್ರಭು ಆಯ್ ಹಾಗು ಸಕಲೇಶಪುರ ಎಸಿಎಫ್ ಮಹದೇವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಅಭಿಮನ್ಯು, ಭೀಮ, ಅರ್ಜುನ, ಪ್ರಶಾಂತ, ಸೇರಿ ಎಂಟು ಸಾಕಾನೆಗಳು ಭಾಗಿಯಾಗಿವೆ. ಒಟ್ಟು 21 ದಿನ ಕಾರ್ಯಾಚರಣೆಗೆ ಸಿದ್ದತೆ ನಡೆದಿದ್ದು 9 ಆನೆಗಳಿಗೆ ರೇಡಿಯೋ ಕಾಲರ್ ಹಾಗು ಜನರಲ್ಲಿ ಜೀವ ಭಯ ಸೃಷ್ಟಿ ಮಾಡಿರೊ ಐದು ಗಂಡಾನೆಗಳ ಸೆರೆ ಹಿಡಿದು ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಲಾಗುತ್ತೆ.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

14 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

31 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

44 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago