ಮೈಸೂರು

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ ಆದೇಶವನ್ನು ಪಾಲಿಸಲು ಮುಂದಾಗಿದೆ.
ಇಂದಿನಿಂದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ 21 ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ದುಬಾರೆ, ಮತ್ತಿಗೋಡು, ಆನೆ ಚೌಕಿಯಿಂದ 8 ಸಾಕಾನೆಗಳನ್ನು ಬಳಸಿ ಹಾಸನ ಜಿಲ್ಲೆಯ ಬೇಲೂರು, ಆಲೂರು ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರೊ ಕಾಡಾನೆ ಹಿಂಡಿನ ಚಲನವಲನ ವೀಕ್ಷಣೆಗಾಗಿ ರೇಡಿಯೋ ಕಾಲರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳೆಕಾರಣ ಹಾಗು ಸಾಕಾನೆಗಳು ದಸರಾಕ್ಕೆ ಹೋಗಿದ್ದ ಕಾರಣ ಕಾರ್ಯಾಚರಣೆ ತಡವಾಗಿತ್ತು. ಇಂದಿನಿಂದ ಗುಂಪಿನಲ್ಲಿರೊ ಹೆಣ್ಣಾನೆ ಹಾಗು ಒಂಟಿಯಾಗಿ ಓಡಾಡೊ ಸಲಗಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗುತ್ತಿದೆ.ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಗಜಪಡೆ ಉಪಟಳ ತಡೆಗೆ ಜನರು ಆಗ್ರಹಿಸಿದ್ರು, ಕಳೆದ ಒಂದು ತಿಂಗಳಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಅರೆಹಳ್ಕಿ ಭಾಗದಲ್ಲಿ ಆನೆಗಳ ದಾಂದಲೆ ಹೆಚ್ಚಿತ್ತು.ಕಾಡಾನೆಗಳು ಕಾಫಿ, ಬಾಳೆ, ಅಡಿಕೆ ಬೆಳೆ‌ನಾಶ ಮಾಡುತ್ತಿವೆ. ಗುಂಪು ಗುಂಪಾಗಿ ಓಡಾಡುತ್ತಾ, ಗ್ರಾಮಗಳ ಸನಿಹವೇ ಬಂದು ಜೀವ ಭಯ ಸೃಷ್ಟಿ ಮಾಡುತ್ತಿವೆ. ಆನೆಗಳ ಸಂಚಾರದಿಂದ ಜನರು ತಮ್ಮ‌ಕಾಫಿ ತೋಟಕ್ಕೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ಸಂಪೂರ್ಣ ಸ್ಥಳಾಂತರಕ್ಕೆ ಜನರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಕ್ರಮವಾಗಿ ರೇಡಿಯೋ ಕಾಲರಿಂಗ್ ಹಾಗೂ ಕೆಲ‌ ಪುಂಡಾನೆ ಸೆರೆ ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಡಿಸಿಎಫ್ ಮೋಹನ್ ಕುಮಾರ್, ಹಾಸನ ಎಸಿಎಫ್ ಪ್ರಭು ಆಯ್ ಹಾಗು ಸಕಲೇಶಪುರ ಎಸಿಎಫ್ ಮಹದೇವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಅಭಿಮನ್ಯು, ಭೀಮ, ಅರ್ಜುನ, ಪ್ರಶಾಂತ, ಸೇರಿ ಎಂಟು ಸಾಕಾನೆಗಳು ಭಾಗಿಯಾಗಿವೆ. ಒಟ್ಟು 21 ದಿನ ಕಾರ್ಯಾಚರಣೆಗೆ ಸಿದ್ದತೆ ನಡೆದಿದ್ದು 9 ಆನೆಗಳಿಗೆ ರೇಡಿಯೋ ಕಾಲರ್ ಹಾಗು ಜನರಲ್ಲಿ ಜೀವ ಭಯ ಸೃಷ್ಟಿ ಮಾಡಿರೊ ಐದು ಗಂಡಾನೆಗಳ ಸೆರೆ ಹಿಡಿದು ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಲಾಗುತ್ತೆ.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

4 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

4 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

4 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

4 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

4 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

5 hours ago