ಮೈಸೂರು

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ ಆದೇಶವನ್ನು ಪಾಲಿಸಲು ಮುಂದಾಗಿದೆ.
ಇಂದಿನಿಂದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ 21 ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ದುಬಾರೆ, ಮತ್ತಿಗೋಡು, ಆನೆ ಚೌಕಿಯಿಂದ 8 ಸಾಕಾನೆಗಳನ್ನು ಬಳಸಿ ಹಾಸನ ಜಿಲ್ಲೆಯ ಬೇಲೂರು, ಆಲೂರು ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರೊ ಕಾಡಾನೆ ಹಿಂಡಿನ ಚಲನವಲನ ವೀಕ್ಷಣೆಗಾಗಿ ರೇಡಿಯೋ ಕಾಲರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳೆಕಾರಣ ಹಾಗು ಸಾಕಾನೆಗಳು ದಸರಾಕ್ಕೆ ಹೋಗಿದ್ದ ಕಾರಣ ಕಾರ್ಯಾಚರಣೆ ತಡವಾಗಿತ್ತು. ಇಂದಿನಿಂದ ಗುಂಪಿನಲ್ಲಿರೊ ಹೆಣ್ಣಾನೆ ಹಾಗು ಒಂಟಿಯಾಗಿ ಓಡಾಡೊ ಸಲಗಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗುತ್ತಿದೆ.ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಗಜಪಡೆ ಉಪಟಳ ತಡೆಗೆ ಜನರು ಆಗ್ರಹಿಸಿದ್ರು, ಕಳೆದ ಒಂದು ತಿಂಗಳಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಅರೆಹಳ್ಕಿ ಭಾಗದಲ್ಲಿ ಆನೆಗಳ ದಾಂದಲೆ ಹೆಚ್ಚಿತ್ತು.ಕಾಡಾನೆಗಳು ಕಾಫಿ, ಬಾಳೆ, ಅಡಿಕೆ ಬೆಳೆ‌ನಾಶ ಮಾಡುತ್ತಿವೆ. ಗುಂಪು ಗುಂಪಾಗಿ ಓಡಾಡುತ್ತಾ, ಗ್ರಾಮಗಳ ಸನಿಹವೇ ಬಂದು ಜೀವ ಭಯ ಸೃಷ್ಟಿ ಮಾಡುತ್ತಿವೆ. ಆನೆಗಳ ಸಂಚಾರದಿಂದ ಜನರು ತಮ್ಮ‌ಕಾಫಿ ತೋಟಕ್ಕೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ಸಂಪೂರ್ಣ ಸ್ಥಳಾಂತರಕ್ಕೆ ಜನರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಕ್ರಮವಾಗಿ ರೇಡಿಯೋ ಕಾಲರಿಂಗ್ ಹಾಗೂ ಕೆಲ‌ ಪುಂಡಾನೆ ಸೆರೆ ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಡಿಸಿಎಫ್ ಮೋಹನ್ ಕುಮಾರ್, ಹಾಸನ ಎಸಿಎಫ್ ಪ್ರಭು ಆಯ್ ಹಾಗು ಸಕಲೇಶಪುರ ಎಸಿಎಫ್ ಮಹದೇವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಅಭಿಮನ್ಯು, ಭೀಮ, ಅರ್ಜುನ, ಪ್ರಶಾಂತ, ಸೇರಿ ಎಂಟು ಸಾಕಾನೆಗಳು ಭಾಗಿಯಾಗಿವೆ. ಒಟ್ಟು 21 ದಿನ ಕಾರ್ಯಾಚರಣೆಗೆ ಸಿದ್ದತೆ ನಡೆದಿದ್ದು 9 ಆನೆಗಳಿಗೆ ರೇಡಿಯೋ ಕಾಲರ್ ಹಾಗು ಜನರಲ್ಲಿ ಜೀವ ಭಯ ಸೃಷ್ಟಿ ಮಾಡಿರೊ ಐದು ಗಂಡಾನೆಗಳ ಸೆರೆ ಹಿಡಿದು ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಲಾಗುತ್ತೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago