ಮೈಸೂರು

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ ಆದೇಶವನ್ನು ಪಾಲಿಸಲು ಮುಂದಾಗಿದೆ.
ಇಂದಿನಿಂದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ 21 ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ದುಬಾರೆ, ಮತ್ತಿಗೋಡು, ಆನೆ ಚೌಕಿಯಿಂದ 8 ಸಾಕಾನೆಗಳನ್ನು ಬಳಸಿ ಹಾಸನ ಜಿಲ್ಲೆಯ ಬೇಲೂರು, ಆಲೂರು ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರೊ ಕಾಡಾನೆ ಹಿಂಡಿನ ಚಲನವಲನ ವೀಕ್ಷಣೆಗಾಗಿ ರೇಡಿಯೋ ಕಾಲರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳೆಕಾರಣ ಹಾಗು ಸಾಕಾನೆಗಳು ದಸರಾಕ್ಕೆ ಹೋಗಿದ್ದ ಕಾರಣ ಕಾರ್ಯಾಚರಣೆ ತಡವಾಗಿತ್ತು. ಇಂದಿನಿಂದ ಗುಂಪಿನಲ್ಲಿರೊ ಹೆಣ್ಣಾನೆ ಹಾಗು ಒಂಟಿಯಾಗಿ ಓಡಾಡೊ ಸಲಗಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗುತ್ತಿದೆ.ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಗಜಪಡೆ ಉಪಟಳ ತಡೆಗೆ ಜನರು ಆಗ್ರಹಿಸಿದ್ರು, ಕಳೆದ ಒಂದು ತಿಂಗಳಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಅರೆಹಳ್ಕಿ ಭಾಗದಲ್ಲಿ ಆನೆಗಳ ದಾಂದಲೆ ಹೆಚ್ಚಿತ್ತು.ಕಾಡಾನೆಗಳು ಕಾಫಿ, ಬಾಳೆ, ಅಡಿಕೆ ಬೆಳೆ‌ನಾಶ ಮಾಡುತ್ತಿವೆ. ಗುಂಪು ಗುಂಪಾಗಿ ಓಡಾಡುತ್ತಾ, ಗ್ರಾಮಗಳ ಸನಿಹವೇ ಬಂದು ಜೀವ ಭಯ ಸೃಷ್ಟಿ ಮಾಡುತ್ತಿವೆ. ಆನೆಗಳ ಸಂಚಾರದಿಂದ ಜನರು ತಮ್ಮ‌ಕಾಫಿ ತೋಟಕ್ಕೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ಸಂಪೂರ್ಣ ಸ್ಥಳಾಂತರಕ್ಕೆ ಜನರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಕ್ರಮವಾಗಿ ರೇಡಿಯೋ ಕಾಲರಿಂಗ್ ಹಾಗೂ ಕೆಲ‌ ಪುಂಡಾನೆ ಸೆರೆ ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಡಿಸಿಎಫ್ ಮೋಹನ್ ಕುಮಾರ್, ಹಾಸನ ಎಸಿಎಫ್ ಪ್ರಭು ಆಯ್ ಹಾಗು ಸಕಲೇಶಪುರ ಎಸಿಎಫ್ ಮಹದೇವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಅಭಿಮನ್ಯು, ಭೀಮ, ಅರ್ಜುನ, ಪ್ರಶಾಂತ, ಸೇರಿ ಎಂಟು ಸಾಕಾನೆಗಳು ಭಾಗಿಯಾಗಿವೆ. ಒಟ್ಟು 21 ದಿನ ಕಾರ್ಯಾಚರಣೆಗೆ ಸಿದ್ದತೆ ನಡೆದಿದ್ದು 9 ಆನೆಗಳಿಗೆ ರೇಡಿಯೋ ಕಾಲರ್ ಹಾಗು ಜನರಲ್ಲಿ ಜೀವ ಭಯ ಸೃಷ್ಟಿ ಮಾಡಿರೊ ಐದು ಗಂಡಾನೆಗಳ ಸೆರೆ ಹಿಡಿದು ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಲಾಗುತ್ತೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago