ಮೈಸೂರು

ಮಗನ ಆಟ ಕಣ್ತುಂಬಿಕೊಂಡ ರಾಹುಲ್‌ ದ್ರಾವಿಡ್‌ ದಂಪತಿ

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು.

ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ ಸಹಕಾರದಿಂದ ಕರ್ನಾಕಟ ಹಾಗೂ ಉತ್ತರಖಂಡ್‌ ನಡುವಿನ ನಾಲ್ಕು ದಿನಗಳ ಪಂದ್ಯ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ ತಂಡಗಳ ನಡುವೆ ಪಂದ್ಯ ನಡೆಯಲಿದ್ದು , ಸದ್ಯ  ಕರ್ನಾಟಕ ಹಾಗೂ ಉತ್ತರಖಂಡ್‌ ಪಂದ್ಯಾವಳಿ ಮೈಸೂರಿನಲ್ಲಿ ನಡೆಯುತ್ತಿದೆ.

ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಪ್ರತಿನಿಧಿಸುತ್ತಿದ್ದಾರೆ. ಮಗನ ಆಟವನ್ನು ನೋಡಲು ಪತ್ನಿ ಡಾ.ವಿಜೇತರೊಂದಿಗೆ ದ್ರಾವಿಡ್‌ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಸ್ಟೆಪ್ಸ್‌ ಮೇಲೆ ಕೂತು ಆಟ ವೀಕ್ಷಿಸಿದ ʼದಿ ವಾಲ್‌ʼ
ಸಾಮಾನ್ಯವಾಗಿ ಯಾರೇ ಮುಖ್ಯ ಅತಿಥಿಗಳು ಕ್ರಿಕೆಟ್‌ ವೀಕ್ಷಣೆಗೆ ಬಂದರೂ, ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಕಚೇರಿ ಅಥವ ಗಣ್ಯರು ಕುಳಿತುಕೊಳ್ಳುವ ಸ್ಥಳದಲ್ಲಿ ಕೂತು ಪಂದ್ಯ ವೀಕ್ಷಣೆ ಮಾಡುತ್ತಾರೆ. ಆದರೆ ದ್ರಾವಿಡ್‌ ದಂಪತಿಗಳು ಸಾಮಾನ್ಯರಲ್ಲಿ ಸಾಮಾನ್ಯರಂತೆ ಕ್ರೀಡಾಂಗಣದ ಸುತ್ತ ಇರುವ ಮೆಟ್ಟಲಿನ ಮೇಲೆ ಕುಳಿತು ಪಂದ್ಯ ವೀಕ್ಷಣೆ ಮಾಡಿದ್ದು ಎಲ್ಲರ ಗಮನ ಸೇಳೆದಿತ್ತು.

andolanait

Recent Posts

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

2 mins ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

8 mins ago

ಮನರೇಗಾ | ಬಹಿರಂಗ ಚರ್ಚೆಗೆ ನಾವು ಸಿದ್ಧ : ಡಿಸಿಎಂ ಡಿಕೆಶಿ

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ…

16 mins ago

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ…

58 mins ago

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ : ನಿಧಿ ಕಾಯ್ದೆ ಹೇಳೋದೇನು? ಪುರಾತತ್ವಜ್ಞರ ವಾದವೇನು? ಇಲ್ಲಿದೆ ಸಮಗ್ರ ಮಾಹಿತಿ

ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ…

2 hours ago

ಮೂಲ ಸೌಕರ್ಯ ಸಮಸ್ಯೆ : ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಸಂಸದ ಯದುವೀರ್‌

ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು…

3 hours ago