ಮೈಸೂರು

ಮಗನ ಆಟ ಕಣ್ತುಂಬಿಕೊಂಡ ರಾಹುಲ್‌ ದ್ರಾವಿಡ್‌ ದಂಪತಿ

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು.

ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ ಸಹಕಾರದಿಂದ ಕರ್ನಾಕಟ ಹಾಗೂ ಉತ್ತರಖಂಡ್‌ ನಡುವಿನ ನಾಲ್ಕು ದಿನಗಳ ಪಂದ್ಯ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ ತಂಡಗಳ ನಡುವೆ ಪಂದ್ಯ ನಡೆಯಲಿದ್ದು , ಸದ್ಯ  ಕರ್ನಾಟಕ ಹಾಗೂ ಉತ್ತರಖಂಡ್‌ ಪಂದ್ಯಾವಳಿ ಮೈಸೂರಿನಲ್ಲಿ ನಡೆಯುತ್ತಿದೆ.

ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಪ್ರತಿನಿಧಿಸುತ್ತಿದ್ದಾರೆ. ಮಗನ ಆಟವನ್ನು ನೋಡಲು ಪತ್ನಿ ಡಾ.ವಿಜೇತರೊಂದಿಗೆ ದ್ರಾವಿಡ್‌ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಸ್ಟೆಪ್ಸ್‌ ಮೇಲೆ ಕೂತು ಆಟ ವೀಕ್ಷಿಸಿದ ʼದಿ ವಾಲ್‌ʼ
ಸಾಮಾನ್ಯವಾಗಿ ಯಾರೇ ಮುಖ್ಯ ಅತಿಥಿಗಳು ಕ್ರಿಕೆಟ್‌ ವೀಕ್ಷಣೆಗೆ ಬಂದರೂ, ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಕಚೇರಿ ಅಥವ ಗಣ್ಯರು ಕುಳಿತುಕೊಳ್ಳುವ ಸ್ಥಳದಲ್ಲಿ ಕೂತು ಪಂದ್ಯ ವೀಕ್ಷಣೆ ಮಾಡುತ್ತಾರೆ. ಆದರೆ ದ್ರಾವಿಡ್‌ ದಂಪತಿಗಳು ಸಾಮಾನ್ಯರಲ್ಲಿ ಸಾಮಾನ್ಯರಂತೆ ಕ್ರೀಡಾಂಗಣದ ಸುತ್ತ ಇರುವ ಮೆಟ್ಟಲಿನ ಮೇಲೆ ಕುಳಿತು ಪಂದ್ಯ ವೀಕ್ಷಣೆ ಮಾಡಿದ್ದು ಎಲ್ಲರ ಗಮನ ಸೇಳೆದಿತ್ತು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago