ಮೈಸೂರು

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ, ಸಹಾಯಕ ಕೃಷಿ ನಿರ್ದೇಶಕ ಅನಿಲ್ ಕುಮಾರ್, ಕೃಷಿ ಅಧಿಕಾರಿ ಜೈ ಕುಮಾರ್, ವೆಂಕಟಾಚಲಪತಿ ಹಾಗೂ ಡಿವೈಎಸ್‌ಪಿ ರವಿ, ಪೊಲೀಸ್ ಇಲಾಖೆಯ ರಾಧಾ ಹಾಗೂ ಬಸಪ್ಪರವರ ನೇತೃತ್ವದಲ್ಲಿ ದಾಳಿ ಮಾಡಿ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಜತೆಗೆ ೩ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಚೀಲ ಬದಲಿಸಿ ಕೇರಳಕ್ಕೆ ಯೂರಿಯಾ ಸಾಗಿಸುವ ಯತ್ನ ಇರಬಹುದು ಎಂದು ಶಂಕಿಸಲಾಗಿದೆ. ಮೂಟೆಗಳನ್ನು ಸಂಗ್ರಹಿಸಿದ ವ್ಯಕ್ತಿಯ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

28 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

30 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

31 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago