ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ, ಸಹಾಯಕ ಕೃಷಿ ನಿರ್ದೇಶಕ ಅನಿಲ್ ಕುಮಾರ್, ಕೃಷಿ ಅಧಿಕಾರಿ ಜೈ ಕುಮಾರ್, ವೆಂಕಟಾಚಲಪತಿ ಹಾಗೂ ಡಿವೈಎಸ್ಪಿ ರವಿ, ಪೊಲೀಸ್ ಇಲಾಖೆಯ ರಾಧಾ ಹಾಗೂ ಬಸಪ್ಪರವರ ನೇತೃತ್ವದಲ್ಲಿ ದಾಳಿ ಮಾಡಿ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಜತೆಗೆ ೩ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಚೀಲ ಬದಲಿಸಿ ಕೇರಳಕ್ಕೆ ಯೂರಿಯಾ ಸಾಗಿಸುವ ಯತ್ನ ಇರಬಹುದು ಎಂದು ಶಂಕಿಸಲಾಗಿದೆ. ಮೂಟೆಗಳನ್ನು ಸಂಗ್ರಹಿಸಿದ ವ್ಯಕ್ತಿಯ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…