ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರು ಯುವತಿಯರ ರಕ್ಷಣೆ

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು ಎಂಬ ಸ್ಥಳದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷಹೊಡ್ದಿ ಕರೆತಂದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು. ಈ ವೇಶ್ಯವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಮುಖ್ಯ ಆರೋಪಿ ಮಂಜು ಎಂಬಾತನನ್ನು ಹಾಗೂ ಮತೋರ್ವ ಪುರುಷ ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಸ್ಥಳದಲ್ಲಿ ಇದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ದಾಳಿ ಯಲ್ಲಿ 6 ಜನ ವಿಟಪುರುಷರುಗಳನ್ನು ಸಹ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ದಂಧೆಯನ್ನು ನಡೆಸುತ್ತಿದ ಬಗ್ಗೆ ಮಾಹಿತಿಯನ್ನು ಪಡೆದ ಒಡನಾಡಿ ಸಂಸ್ಥೆಯು ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ಸೈಬರ್ ಕ್ರೈ ಠಾಣೆಯ ಇನ್ಸಪೆಕ್ಟರ್ ಸುನೀಲ್ ಅವರಿಗೆ ತಿಳಿಸಿ ತಂಡವನ್ನು ರಚನೆ ಮಾಡಿದ್ದಾರೆ.

ಸುನಿಲ್ ನೇತೃತ್ವದಲ್ಲಿ ಒಡನಾಡಿ ತಂಡವು ವೇಶ್ಯಾವಾಟಿಕೆ ನಡೆಯುತ್ತಿದ್ದ ದಂಧೆಯ ಮನೆಯ ಮೇಲೆ ಶನಿವಾರ ರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 6 ವಿಟಪುರುಷರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಮುಖ್ಯ ಆರೋಪಿಯಾದ ಮಂಜು ಎಂಬಾತನು ಹಲವು ವರ್ಷಗಳಿಂದ ಬೇರೆ ಬೇರೆ ಮೂಲಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆಯಿಸಿ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದು, ಈ ದಂಧೆಯನ್ನು ನಡೆಸಲು ಈತ ನಗರ ಪ್ರದೇಶದಿಂದ ದೂರವಿರುವ ಬಡಾವಣೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ. ಅಲ್ಲದೆ 20 ದಿನ ಅಥವಾ 30 ದಿನಗಳಲ್ಲಿ ಮನೆಯನ್ನು ಬದಲಾಯಿಸುತ್ತಿದ್ದ, ಈ ರೀತಿಯಾಗಿ ಆರೋಪಿಯು ತನ್ನ ತಂತ್ರಗಾರಿಕೆಯನ್ನು ಬಳಸಿಕೊಂಡು ತುಂಬಾ ಚಾಣಾಕ್ಷತನದಿಂದ ದಂದೆಯನ್ನು ನಡೆಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಆರೋಪಿಗಳ ವಿರುದ್ದ ಮಾನವ ಕಳ್ಳ ಸಾಗಾಣಿಕೆ ಕಾಯ್ದೆ-1956 ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಕಾಯ್ದೆಯಡಿ ದೂರು ದಾಖಲಾಗಿದೆ. ದಾಳಿಯ ವೇಳೆ ಪೋಲಿಸ್ ಸಿಬ್ಬಂದಿಗಳು, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಪರಶು ಹಾಗೂ ಒಡನಾಡಿ ಸಂಸ್ಥೆಯ ಸಿಬ್ಬಂದಿಗಳಾದ ಕೆ.ಪ್ರದೀಪ್, ಬಾಲುಕುಮಾರ್, ಸಚಿನ್, ಮಣಿ, ಸುಮಾ, ಶಶಾಂಕ್, ನಾಝಿಯಾ ಬಾನು ಇದ್ದರು.

ಆಂದೋಲನ ಡೆಸ್ಕ್

Recent Posts

ಪೊನ್ನಂಪೇಟೆ: ಕಾಡಾನೆ ಕಂಡು ದ್ವಿಚಕ್ರ ವಾಹನದಿಂದ ಬಿದ್ದ ಸವಾರ

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ…

7 mins ago

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್‌(21)…

23 mins ago

ಉಪವಾಸ ಸತ್ಯಾಗ್ರಹ ಧರಣಿ ವೇಳೆ ವೃದ್ಧ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ…

42 mins ago

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

1 hour ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

3 hours ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

3 hours ago