ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರು ಯುವತಿಯರ ರಕ್ಷಣೆ

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು ಎಂಬ ಸ್ಥಳದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷಹೊಡ್ದಿ ಕರೆತಂದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು. ಈ ವೇಶ್ಯವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಮುಖ್ಯ ಆರೋಪಿ ಮಂಜು ಎಂಬಾತನನ್ನು ಹಾಗೂ ಮತೋರ್ವ ಪುರುಷ ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಸ್ಥಳದಲ್ಲಿ ಇದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ದಾಳಿ ಯಲ್ಲಿ 6 ಜನ ವಿಟಪುರುಷರುಗಳನ್ನು ಸಹ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ದಂಧೆಯನ್ನು ನಡೆಸುತ್ತಿದ ಬಗ್ಗೆ ಮಾಹಿತಿಯನ್ನು ಪಡೆದ ಒಡನಾಡಿ ಸಂಸ್ಥೆಯು ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ಸೈಬರ್ ಕ್ರೈ ಠಾಣೆಯ ಇನ್ಸಪೆಕ್ಟರ್ ಸುನೀಲ್ ಅವರಿಗೆ ತಿಳಿಸಿ ತಂಡವನ್ನು ರಚನೆ ಮಾಡಿದ್ದಾರೆ.

ಸುನಿಲ್ ನೇತೃತ್ವದಲ್ಲಿ ಒಡನಾಡಿ ತಂಡವು ವೇಶ್ಯಾವಾಟಿಕೆ ನಡೆಯುತ್ತಿದ್ದ ದಂಧೆಯ ಮನೆಯ ಮೇಲೆ ಶನಿವಾರ ರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 6 ವಿಟಪುರುಷರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಮುಖ್ಯ ಆರೋಪಿಯಾದ ಮಂಜು ಎಂಬಾತನು ಹಲವು ವರ್ಷಗಳಿಂದ ಬೇರೆ ಬೇರೆ ಮೂಲಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆಯಿಸಿ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದು, ಈ ದಂಧೆಯನ್ನು ನಡೆಸಲು ಈತ ನಗರ ಪ್ರದೇಶದಿಂದ ದೂರವಿರುವ ಬಡಾವಣೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ. ಅಲ್ಲದೆ 20 ದಿನ ಅಥವಾ 30 ದಿನಗಳಲ್ಲಿ ಮನೆಯನ್ನು ಬದಲಾಯಿಸುತ್ತಿದ್ದ, ಈ ರೀತಿಯಾಗಿ ಆರೋಪಿಯು ತನ್ನ ತಂತ್ರಗಾರಿಕೆಯನ್ನು ಬಳಸಿಕೊಂಡು ತುಂಬಾ ಚಾಣಾಕ್ಷತನದಿಂದ ದಂದೆಯನ್ನು ನಡೆಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಆರೋಪಿಗಳ ವಿರುದ್ದ ಮಾನವ ಕಳ್ಳ ಸಾಗಾಣಿಕೆ ಕಾಯ್ದೆ-1956 ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಕಾಯ್ದೆಯಡಿ ದೂರು ದಾಖಲಾಗಿದೆ. ದಾಳಿಯ ವೇಳೆ ಪೋಲಿಸ್ ಸಿಬ್ಬಂದಿಗಳು, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಪರಶು ಹಾಗೂ ಒಡನಾಡಿ ಸಂಸ್ಥೆಯ ಸಿಬ್ಬಂದಿಗಳಾದ ಕೆ.ಪ್ರದೀಪ್, ಬಾಲುಕುಮಾರ್, ಸಚಿನ್, ಮಣಿ, ಸುಮಾ, ಶಶಾಂಕ್, ನಾಝಿಯಾ ಬಾನು ಇದ್ದರು.

ಆಂದೋಲನ ಡೆಸ್ಕ್

Recent Posts

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

10 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

38 mins ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

3 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago