ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರು ಯುವತಿಯರ ರಕ್ಷಣೆ

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.

ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು ಎಂಬ ಸ್ಥಳದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷಹೊಡ್ದಿ ಕರೆತಂದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು. ಈ ವೇಶ್ಯವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಮುಖ್ಯ ಆರೋಪಿ ಮಂಜು ಎಂಬಾತನನ್ನು ಹಾಗೂ ಮತೋರ್ವ ಪುರುಷ ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ ಸ್ಥಳದಲ್ಲಿ ಇದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ದಾಳಿ ಯಲ್ಲಿ 6 ಜನ ವಿಟಪುರುಷರುಗಳನ್ನು ಸಹ ಪೋಲೀಸರು ವಶಕ್ಕೆ ಪಡೆದಿದ್ದಾರೆ.

ದಂಧೆಯನ್ನು ನಡೆಸುತ್ತಿದ ಬಗ್ಗೆ ಮಾಹಿತಿಯನ್ನು ಪಡೆದ ಒಡನಾಡಿ ಸಂಸ್ಥೆಯು ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ಸೈಬರ್ ಕ್ರೈ ಠಾಣೆಯ ಇನ್ಸಪೆಕ್ಟರ್ ಸುನೀಲ್ ಅವರಿಗೆ ತಿಳಿಸಿ ತಂಡವನ್ನು ರಚನೆ ಮಾಡಿದ್ದಾರೆ.

ಸುನಿಲ್ ನೇತೃತ್ವದಲ್ಲಿ ಒಡನಾಡಿ ತಂಡವು ವೇಶ್ಯಾವಾಟಿಕೆ ನಡೆಯುತ್ತಿದ್ದ ದಂಧೆಯ ಮನೆಯ ಮೇಲೆ ಶನಿವಾರ ರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ 6 ವಿಟಪುರುಷರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಮುಖ್ಯ ಆರೋಪಿಯಾದ ಮಂಜು ಎಂಬಾತನು ಹಲವು ವರ್ಷಗಳಿಂದ ಬೇರೆ ಬೇರೆ ಮೂಲಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆಯಿಸಿ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದು, ಈ ದಂಧೆಯನ್ನು ನಡೆಸಲು ಈತ ನಗರ ಪ್ರದೇಶದಿಂದ ದೂರವಿರುವ ಬಡಾವಣೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ. ಅಲ್ಲದೆ 20 ದಿನ ಅಥವಾ 30 ದಿನಗಳಲ್ಲಿ ಮನೆಯನ್ನು ಬದಲಾಯಿಸುತ್ತಿದ್ದ, ಈ ರೀತಿಯಾಗಿ ಆರೋಪಿಯು ತನ್ನ ತಂತ್ರಗಾರಿಕೆಯನ್ನು ಬಳಸಿಕೊಂಡು ತುಂಬಾ ಚಾಣಾಕ್ಷತನದಿಂದ ದಂದೆಯನ್ನು ನಡೆಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಆರೋಪಿಗಳ ವಿರುದ್ದ ಮಾನವ ಕಳ್ಳ ಸಾಗಾಣಿಕೆ ಕಾಯ್ದೆ-1956 ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಕಾಯ್ದೆಯಡಿ ದೂರು ದಾಖಲಾಗಿದೆ. ದಾಳಿಯ ವೇಳೆ ಪೋಲಿಸ್ ಸಿಬ್ಬಂದಿಗಳು, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಪರಶು ಹಾಗೂ ಒಡನಾಡಿ ಸಂಸ್ಥೆಯ ಸಿಬ್ಬಂದಿಗಳಾದ ಕೆ.ಪ್ರದೀಪ್, ಬಾಲುಕುಮಾರ್, ಸಚಿನ್, ಮಣಿ, ಸುಮಾ, ಶಶಾಂಕ್, ನಾಝಿಯಾ ಬಾನು ಇದ್ದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

34 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago