ಮೈಸೂರು

ರೈಲ್ವೆ ಅಧಿಕಾರಿಗಳಿಗೆ ಕನ್ನಡ ಪಾಠ ಮಾಡಿದ ರೈಲ್ವೆ ಸಚಿವ ಸೋಮಣ್ಣ..!

ಮೈಸೂರು : ದೇಶದ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಕೆಲಸ ಮಾಡಲು ಬಂದು ಹಲವಾರು ವರ್ಷವಾಗಿದರೂ ಏಕೆ ನೀವು ಕನ್ನಡ ಕಲಿತಿಲ್ಲ. ಆದಷ್ಟೂ ಬೇಗ ಕನ್ನಡ ಕಲ್ಲಿತುಕೊಳ್ಳಿ ಎಂದು ರೈಲ್ವೆ ಅಧಿಕಾರಿಗಳನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತರಾಟೆಗೆ ತೆಗೆದುಕೊಂಡರು.

ಮೈಸೂರಿನ ರೈಲ್ವೆ ಡಿಆರ್‌ಎಂ ಕಚೇರಿಯಲ್ಲಿ ಮೈಸೂರು ವಿಭಾಗೀಯ ರೈಲ್ವೆ ಪ್ರಬಂಧಕರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಮರ್ಶಾ ಸಭೆ ನಡೆಸಿ ಮೈಸೂರಿನ ವಿಭಾಗೀಯ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ವೇಳೆ ಅಧಿಕಾರಿಗಳು ಹಿಂದಿಯಲ್ಲೆ ಮಾಹಿತಿ ನೀಡಿದರು. ಆವಾಗ ಸಚಿವರು ಪ್ರತಿಕ್ರಿಯಿಸಿ, ನಾನು ಮೂರು ತಿಂಗಳಿನಲ್ಲಿ ಹಿಂದಿ ಕಲಿತುಕೊಂಡು ಎಲ್ಲಾ ಕಡೆ ಹಿಂದಿಯಲ್ಲಿ ಮಾತನಾಡುತ್ತಿದ್ದೇನೆ. ಆದರೆ, ನೀವು ಹಲವಾರು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲೇ ಕೆಲಸ ನಿರ್ವಹಿಸುತ್ತಿದ್ದಿರಿ, ಆದರೆ ಕನ್ನಡ ಕಲಿತಿಲ್ಲ ಎಂದು ಗರಂ ಆದರು. ಮುಂದೆ ಆದರು ಕನ್ನಡ ಕಲಿತುಕೊಳ್ಳಿ ಕನ್ನಡ ಕಲಿತುಕೊಂಡರೆ ಒಳಿತು ಎಂದು ಕನ್ನಡದ ಪ್ರೀತಿ ತೋರಿದರು.

ಇಲಾಖೆಗೆ ಯಾರು ಅನಿವಾರ್ಯವಲ್ಲ
ರೈಲ್ವೇ ಇಲಾಖೆಗೆ ಯಾರು ಅನಿವಾರ್ಯವಲ್ಲ. ಆದರೆ ರೈಲ್ವೇ ಇಲಾಖೆ ಎಲ್ಲರಿಗೂ ಅನಿವಾರ್ಯ. ನಿಮ್ಮೊಂದಿಗೆ ಯಾರೇ ಮಾತನಾಡಿದರು ಸೌಜನ್ಯದಿಂದ ವರ್ತಿಸಿ, ಗೌರವಕೊಟ್ಟು ಮಾತನಾಡಿ ಎಂದು ಸಲಹೆ ನೀಡಿ, ಅಧಿಕಾರಿಯೊಬ್ಬರಿಗೆ ತರಾಟೆ ತೆಗೆದುಕೊಂಡರು. ನೀವು ತಪ್ಪು ಮಾಡಿದರೆ, ಹುಬ್ಬಳಿ ಅಲ್ಲ ಕಾಶ್ಮೀರಕ್ಕೆ ಕಳುಹಿಸುತ್ತೇನೆ ಎಂದು ಸಹ ಎಚ್ಚರಿಸಿದರು.

ಜೂ.೬ರಂದು ವಿಶ್ವದ ಭೂಪಟದಲ್ಲಿ ಭಾತರದ ಅಭಿವೃದ್ದಿಯ ಸಂಕೇತವಾಗಿ ಕಾಶ್ಮೀರದಿಂದ ಕನ್ಯಾಕುಮಾರಿಗೆ ರೈಲನ್ನು ಚಾಲನೆ ಮಾಡುವ ಕನಸನ್ನು ಪ್ರಧಾನ ಮಂತ್ರಿಗಳು ರೈಲ್ವೆ ಮಂತ್ರಿಗಳು ಲೋಕಾರ್ಪಣೆ ಮಾಡಿದ್ದಾರೆ. ಇದು ಒಂದು ಐತಿಹಾಸಿಕ ದಿನವಾಗಿದ್ದು, ಚೈನ ಬ್ರಿಡ್ಜ್‌ಗೂ ಸಾಕಷ್ಟು ವ್ಯತ್ಯಾಸವಿದೆ. ಒಮ್ಮೆ ಭೇಟಿ ನೀಡಿ ಎಂದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago