ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.
ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ ಮರಗಳ ತೆರವು ಕಾರ್ಯಚರಣೆ ನಡೆಸುತ್ತಿದೆ. ಕಾಳಿದಾಸ ರಸ್ತೆ, ಒಂಟಿಕೊಪ್ಪಲ್ ರಸ್ತೆ, ಟಿಕೆ ಲೇಔಟ್, ಕುವೆಂಪು ನಗರ, ಪೋಲಿಸ್ ಕಮಿಷನರ್ ಕಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮರಗಳ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಹಲವೆಡೆ ದಾರಿಯುದ್ದಕ್ಕೂ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ರೆಂಬೆ ಕೊಂಬೆಗಳು ಸೇರಿದಂತೆ ಮುನ್ನೆಚ್ಚರಿಕೆಯಾಗಿ ಒಣಗಿದ ರೆಂಬೆ ಕೊಂಬೆಗಳನ್ನೂ ಸಹ ತೆರವುಗೊಳಿಸುತ್ತಿದ್ದಾರೆ.
ಹವಮಾನ ಇಲಾಖೆಯು ಬುಧುವಾರ(ಮೇ.೮) ಬಿರುಗಾಳಿ ಸಹಿತ ಮಳೇ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಎಚ್ಚೆತ್ತಾ ಪಾಲಿಕೆ ಸಿಬ್ಬಂದಿ ಮರಗಳ ಟ್ರಿಮ್ ಮತ್ತು ಬೀಳುವಂತ ಮರಗಳು ಹಾಗೂ ಒಣಗಿದ ಮರಗಳ ತೆರವು ಮಾಡಲು ಮುಂದಾಗಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…