ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.
ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ ಮರಗಳ ತೆರವು ಕಾರ್ಯಚರಣೆ ನಡೆಸುತ್ತಿದೆ. ಕಾಳಿದಾಸ ರಸ್ತೆ, ಒಂಟಿಕೊಪ್ಪಲ್ ರಸ್ತೆ, ಟಿಕೆ ಲೇಔಟ್, ಕುವೆಂಪು ನಗರ, ಪೋಲಿಸ್ ಕಮಿಷನರ್ ಕಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮರಗಳ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಹಲವೆಡೆ ದಾರಿಯುದ್ದಕ್ಕೂ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ರೆಂಬೆ ಕೊಂಬೆಗಳು ಸೇರಿದಂತೆ ಮುನ್ನೆಚ್ಚರಿಕೆಯಾಗಿ ಒಣಗಿದ ರೆಂಬೆ ಕೊಂಬೆಗಳನ್ನೂ ಸಹ ತೆರವುಗೊಳಿಸುತ್ತಿದ್ದಾರೆ.
ಹವಮಾನ ಇಲಾಖೆಯು ಬುಧುವಾರ(ಮೇ.೮) ಬಿರುಗಾಳಿ ಸಹಿತ ಮಳೇ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಎಚ್ಚೆತ್ತಾ ಪಾಲಿಕೆ ಸಿಬ್ಬಂದಿ ಮರಗಳ ಟ್ರಿಮ್ ಮತ್ತು ಬೀಳುವಂತ ಮರಗಳು ಹಾಗೂ ಒಣಗಿದ ಮರಗಳ ತೆರವು ಮಾಡಲು ಮುಂದಾಗಿದ್ದಾರೆ.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…