ಮೈಸೂರು

ಮಳೆ ಅವಾಂತರ: ಬಿದ್ದ ಮರಗಳ ತೆರವು ಕಾರ್ಯಚರಣೆಯೇ ಸವಾಲು

ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.

ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ ಮರಗಳ ತೆರವು ಕಾರ್ಯಚರಣೆ ನಡೆಸುತ್ತಿದೆ. ಕಾಳಿದಾಸ ರಸ್ತೆ, ಒಂಟಿಕೊಪ್ಪಲ್ ರಸ್ತೆ, ಟಿಕೆ ಲೇಔಟ್, ಕುವೆಂಪು ನಗರ, ಪೋಲಿಸ್ ಕಮಿಷನರ್ ಕಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮರಗಳ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲಾಗಿದೆ.

ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಹಲವೆಡೆ ದಾರಿಯುದ್ದಕ್ಕೂ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ರೆಂಬೆ ಕೊಂಬೆಗಳು ಸೇರಿದಂತೆ ಮುನ್ನೆಚ್ಚರಿಕೆಯಾಗಿ ಒಣಗಿದ ರೆಂಬೆ ಕೊಂಬೆಗಳನ್ನೂ ಸಹ ತೆರವುಗೊಳಿಸುತ್ತಿದ್ದಾರೆ.

ಹವಮಾನ ಇಲಾಖೆಯು ಬುಧುವಾರ(ಮೇ.೮) ಬಿರುಗಾಳಿ ಸಹಿತ ಮಳೇ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಎಚ್ಚೆತ್ತಾ ಪಾಲಿಕೆ ಸಿಬ್ಬಂದಿ ಮರಗಳ ಟ್ರಿಮ್ ಮತ್ತು ಬೀಳುವಂತ ಮರಗಳು ಹಾಗೂ ಒಣಗಿದ ಮರಗಳ ತೆರವು ಮಾಡಲು ಮುಂದಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ ; ಜೂನ್‌ 4 ಗುರುವಾರ

3 hours ago

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

15 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

15 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

16 hours ago

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ…

18 hours ago

ಸೋನಿಯಾ ಗಾಂಧಿ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ: ಡಿಕೆಶಿ

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

19 hours ago