ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ.
ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ ಮರಗಳ ತೆರವು ಕಾರ್ಯಚರಣೆ ನಡೆಸುತ್ತಿದೆ. ಕಾಳಿದಾಸ ರಸ್ತೆ, ಒಂಟಿಕೊಪ್ಪಲ್ ರಸ್ತೆ, ಟಿಕೆ ಲೇಔಟ್, ಕುವೆಂಪು ನಗರ, ಪೋಲಿಸ್ ಕಮಿಷನರ್ ಕಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಮರಗಳ ತೆರವು ಕಾರ್ಯಚರಣೆಯನ್ನು ಚುರುಕುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಹಲವೆಡೆ ದಾರಿಯುದ್ದಕ್ಕೂ ಮುರಿದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ರೆಂಬೆ ಕೊಂಬೆಗಳು ಸೇರಿದಂತೆ ಮುನ್ನೆಚ್ಚರಿಕೆಯಾಗಿ ಒಣಗಿದ ರೆಂಬೆ ಕೊಂಬೆಗಳನ್ನೂ ಸಹ ತೆರವುಗೊಳಿಸುತ್ತಿದ್ದಾರೆ.
ಹವಮಾನ ಇಲಾಖೆಯು ಬುಧುವಾರ(ಮೇ.೮) ಬಿರುಗಾಳಿ ಸಹಿತ ಮಳೇ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಎಚ್ಚೆತ್ತಾ ಪಾಲಿಕೆ ಸಿಬ್ಬಂದಿ ಮರಗಳ ಟ್ರಿಮ್ ಮತ್ತು ಬೀಳುವಂತ ಮರಗಳು ಹಾಗೂ ಒಣಗಿದ ಮರಗಳ ತೆರವು ಮಾಡಲು ಮುಂದಾಗಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…