ಮೈಸೂರು

ಮೈಸೂರು, ಕೊಡಗಿನಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ

ಮೈಸೂರು  :  ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.

ಮೈಸೂರಿನಲ್ಲಿ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ 6 ಗಂಟೆ ವೇಳೆಗೆ ಅಲ್ಲಲ್ಲಿ ಮಳೆಯಾಗಿದೆ. ಅಲ್ಲದೇ, ರಾತ್ರಿ ಹಾಗೂ ನಾಳೆಯೂ  ಮಳೆಯಾಗುವ ಸಾಧ್ಯತೆಗಳಿವೆ.  ಬೆಂಗಳೂರು, ಕೊಡಗು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು,  ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾತಾವರಣಲದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

25 mins ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

25 mins ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

1 hour ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

2 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

2 hours ago

ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ…

2 hours ago