Transparent umbrella under heavy rain against water drops splash background. Rainy weather concept.
ಮೈಸೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಮೈಸೂರಿನಲ್ಲಿ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ 6 ಗಂಟೆ ವೇಳೆಗೆ ಅಲ್ಲಲ್ಲಿ ಮಳೆಯಾಗಿದೆ. ಅಲ್ಲದೇ, ರಾತ್ರಿ ಹಾಗೂ ನಾಳೆಯೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಕೊಡಗು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣಲದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…
ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ…