Transparent umbrella under heavy rain against water drops splash background. Rainy weather concept.
ಮೈಸೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಮೈಸೂರಿನಲ್ಲಿ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ 6 ಗಂಟೆ ವೇಳೆಗೆ ಅಲ್ಲಲ್ಲಿ ಮಳೆಯಾಗಿದೆ. ಅಲ್ಲದೇ, ರಾತ್ರಿ ಹಾಗೂ ನಾಳೆಯೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಕೊಡಗು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣಲದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…