ಮೈಸೂರು

ಜಂಬೂಸವಾರಿ ದಿನವೂ ಜಿಟಿಜಿಟಿ ಮಳೆ: ಮೈಸೂರು, ಬೆಂಗಳೂರು ಸೇರಿದಂತೆ ಮುಂದಿನ 7 ದಿನ ಮಳೆ

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ ವಿವಿಧೆಡೆ ಜಿಟಿಜಿಟಿ ಮಳೆಯಾಗಿದೆ. ದಸರಾ ಜಂಬೂಸವಾರಿ ಸಾಗುವಾಗಲೂ ಮಳೆಯ ಸಿಂಚನವಾಗಿದ್ದು, ಸಹಸ್ರಾರು ಮಂದಿ ಮಳೆಯನ್ನು ಲೆಕ್ಕಿಸದೇ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.

ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿತ್ತು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿದ ಹಲವೆಡೆ ಮಳೆಯಾಗಲಿದೆ.

ಇನ್ನೂ ಅ.16 ರಿಂದ 18 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಹೇಳಿದೆ.

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದ, ಈ ಜಿಲ್ಲೆಗಳಿಗೆ ಮುಂದಿನ ಏಳು ದಿನಗಳು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

4 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

15 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

38 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

56 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago