ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ ವಿವಿಧೆಡೆ ಜಿಟಿಜಿಟಿ ಮಳೆಯಾಗಿದೆ. ದಸರಾ ಜಂಬೂಸವಾರಿ ಸಾಗುವಾಗಲೂ ಮಳೆಯ ಸಿಂಚನವಾಗಿದ್ದು, ಸಹಸ್ರಾರು ಮಂದಿ ಮಳೆಯನ್ನು ಲೆಕ್ಕಿಸದೇ ಜಂಬೂಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.
ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿತ್ತು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿದ ಹಲವೆಡೆ ಮಳೆಯಾಗಲಿದೆ.
ಇನ್ನೂ ಅ.16 ರಿಂದ 18 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಹೇಳಿದೆ.
ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದ, ಈ ಜಿಲ್ಲೆಗಳಿಗೆ ಮುಂದಿನ ಏಳು ದಿನಗಳು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…