mysuru rainy season
ಮೈಸೂರು : ಧಾರಕಾರ ಮಳೆ ಸುರಿದಾಗಲೆಲ್ಲ ನಗರದ ತಗ್ಗು ಪ್ರದೇಶದ ಜನತೆಗೆ ಎಲ್ಲಿಲ್ಲದ ಆತಂಕ. ನೀರು ಮನೆಗೆ ನುಗ್ಗಿ ಮಾಡುವ ಅವಾಂತರ ಒಂದೆಡೆಯಾದರೆ, ಮತ್ತೊಂದೆಡೆ ಯುಜಿಡಿ ಲೈನ್ಗಳು ಬ್ಲಾಕ್ ಆಗಿ ರಸ್ತೆ ಮೇಲೆ ಕಲುಷಿತ ನೀರು ಹರಿಯುವುದರಿಂದ ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ.
ನಗರದ ಚಾಮರಾಜ ಜೋಡಿಯ ಸುತ್ತಮುತ್ತ ಮಂಗಳವಾರ ಸಂಜೆ ಮತ್ತು ರಾತ್ರಿ ಬಿರುಸಿನ ಮಳೆ ಆಗಿರುವುದರಿಂದ ಯುಜಿಡಿ ಲೈನ್ ಬ್ಲಾಕ್ ಆಗಿ ರಸ್ತೆ ಮೇಲೆ ಕಲುಷಿತ ನೀರು ಹರಿಯುತ್ತಿದೆ. ಇದರಿಂದ ಈ ಭಾಗದ ಜನರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.
ಮಳೆಯಿಂದಾಗಿ ರಸ್ತೆಯ ಮೇಲ್ಭಾಗದಲ್ಲೇ ಉಕ್ಕಿ ಹರಿವ ಮಲ ಮೂತ್ರ ಮಿಶ್ರಿತ ನೀರಿನಿಂದ ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡಚಣೆಯುಂಟಾಗಿದೆ. ಯುಜಿಡಿ ಲೈನ್ ಕಾಮಗಾರಿಗಾಗಿ ಚೆನ್ನಾಗಿರುವ ರಸ್ತೆ ಹಗೆದು ಹಾಳು ಮಾಡಿರುವ ಪಾಲಿಕೆಯಿಂದಲೇ ಇಂತಹ ಸಮಸ್ಯೆ ನಿರ್ಮಾಣವಾಗಿದೆ ಎನ್ನುತ್ತಾರೆ ಸ್ಥಳೀಯರು.
ಬೇಸಿಗೆ ಸಂಧರ್ಭದಲ್ಲಿ ಯುಜಿಡಿ ಕಾಮಗಾರಿಗಳ ಮುಗಿಸದೇ ಮಳೆಗಾಲದ ಸಂದರ್ಭದಲ್ಲಿ ಯುಜಿಡಿ ಕಾಮಗಾರಿ ಕೈಗೆತ್ತಿಕೊಂಡಿರುವ ಪಾಲಿಕೆಯ ಅವೈಜ್ಞಾನಿಕ ಕಾಮಗಾರಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿಯುಂಟಾಗಿದೆ.
ಇನ್ನಾದರೂ ಸಂಬಂಧಪಟ್ಟವರು ಸೂಕ್ತ ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸಮಸ್ಯೆ ಸರಿಪಡಿಸಲಿ ಎನ್ನುವುದು ನಮ್ಮ ಆಶಯವಾಗಿದೆ.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…
ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್ವೊಂದು…
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…