ಮೈಸೂರು

ಮೈಸೂರು | ಮಳೆಗಾಲಕ್ಕೆ ಇಲ್ಲದ ಸಿದ್ಧತೆ ; ತಪ್ಪದ ಅವಾಂತರ

ಮೈಸೂರು : ಧಾರಕಾರ ಮಳೆ ಸುರಿದಾಗಲೆಲ್ಲ ನಗರದ ತಗ್ಗು ಪ್ರದೇಶದ ಜನತೆಗೆ ಎಲ್ಲಿಲ್ಲದ ಆತಂಕ. ನೀರು ಮನೆಗೆ ನುಗ್ಗಿ ಮಾಡುವ ಅವಾಂತರ ಒಂದೆಡೆಯಾದರೆ, ಮತ್ತೊಂದೆಡೆ ಯುಜಿಡಿ ಲೈನ್‌ಗಳು ಬ್ಲಾಕ್‌ ಆಗಿ ರಸ್ತೆ ಮೇಲೆ ಕಲುಷಿತ ನೀರು ಹರಿಯುವುದರಿಂದ ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ.

ನಗರದ ಚಾಮರಾಜ ಜೋಡಿಯ ಸುತ್ತಮುತ್ತ ಮಂಗಳವಾರ ಸಂಜೆ ಮತ್ತು ರಾತ್ರಿ ಬಿರುಸಿನ ಮಳೆ ಆಗಿರುವುದರಿಂದ ಯುಜಿಡಿ ಲೈನ್ ಬ್ಲಾಕ್ ಆಗಿ ರಸ್ತೆ ಮೇಲೆ ಕಲುಷಿತ ನೀರು‌ ಹರಿಯುತ್ತಿದೆ. ಇದರಿಂದ ಈ ಭಾಗದ ಜನರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಮಳೆಯಿಂದಾಗಿ ರಸ್ತೆಯ ಮೇಲ್ಭಾಗದಲ್ಲೇ ಉಕ್ಕಿ ಹರಿವ ಮಲ ಮೂತ್ರ ಮಿಶ್ರಿತ ನೀರಿನಿಂದ ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡಚಣೆಯುಂಟಾಗಿದೆ. ಯುಜಿಡಿ ಲೈನ್ ಕಾಮಗಾರಿಗಾಗಿ ಚೆನ್ನಾಗಿರುವ ರಸ್ತೆ ಹಗೆದು ಹಾಳು ಮಾಡಿರುವ ಪಾಲಿಕೆಯಿಂದಲೇ ಇಂತಹ ಸಮಸ್ಯೆ ನಿರ್ಮಾಣವಾಗಿದೆ ಎನ್ನುತ್ತಾರೆ ಸ್ಥಳೀಯರು.

ಬೇಸಿಗೆ ಸಂಧರ್ಭದಲ್ಲಿ ಯುಜಿಡಿ ಕಾಮಗಾರಿಗಳ ಮುಗಿಸದೇ ಮಳೆಗಾಲದ ಸಂದರ್ಭದಲ್ಲಿ ಯುಜಿಡಿ ಕಾಮಗಾರಿ ಕೈಗೆತ್ತಿಕೊಂಡಿರುವ ಪಾಲಿಕೆಯ ಅವೈಜ್ಞಾನಿಕ ಕಾಮಗಾರಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿಯುಂಟಾಗಿದೆ.
ಇನ್ನಾದರೂ ಸಂಬಂಧಪಟ್ಟವರು ಸೂಕ್ತ ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸಮಸ್ಯೆ ಸರಿಪಡಿಸಲಿ ಎನ್ನುವುದು ನಮ್ಮ ಆಶಯವಾಗಿದೆ.

ಆಂದೋಲನ ಡೆಸ್ಕ್

Recent Posts

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

38 mins ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

1 hour ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

2 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

2 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

3 hours ago