ಮೈಸೂರು

ಮೈಸೂರು | ಮಳೆಗಾಲಕ್ಕೆ ಇಲ್ಲದ ಸಿದ್ಧತೆ ; ತಪ್ಪದ ಅವಾಂತರ

ಮೈಸೂರು : ಧಾರಕಾರ ಮಳೆ ಸುರಿದಾಗಲೆಲ್ಲ ನಗರದ ತಗ್ಗು ಪ್ರದೇಶದ ಜನತೆಗೆ ಎಲ್ಲಿಲ್ಲದ ಆತಂಕ. ನೀರು ಮನೆಗೆ ನುಗ್ಗಿ ಮಾಡುವ ಅವಾಂತರ ಒಂದೆಡೆಯಾದರೆ, ಮತ್ತೊಂದೆಡೆ ಯುಜಿಡಿ ಲೈನ್‌ಗಳು ಬ್ಲಾಕ್‌ ಆಗಿ ರಸ್ತೆ ಮೇಲೆ ಕಲುಷಿತ ನೀರು ಹರಿಯುವುದರಿಂದ ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ.

ನಗರದ ಚಾಮರಾಜ ಜೋಡಿಯ ಸುತ್ತಮುತ್ತ ಮಂಗಳವಾರ ಸಂಜೆ ಮತ್ತು ರಾತ್ರಿ ಬಿರುಸಿನ ಮಳೆ ಆಗಿರುವುದರಿಂದ ಯುಜಿಡಿ ಲೈನ್ ಬ್ಲಾಕ್ ಆಗಿ ರಸ್ತೆ ಮೇಲೆ ಕಲುಷಿತ ನೀರು‌ ಹರಿಯುತ್ತಿದೆ. ಇದರಿಂದ ಈ ಭಾಗದ ಜನರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಮಳೆಯಿಂದಾಗಿ ರಸ್ತೆಯ ಮೇಲ್ಭಾಗದಲ್ಲೇ ಉಕ್ಕಿ ಹರಿವ ಮಲ ಮೂತ್ರ ಮಿಶ್ರಿತ ನೀರಿನಿಂದ ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡಚಣೆಯುಂಟಾಗಿದೆ. ಯುಜಿಡಿ ಲೈನ್ ಕಾಮಗಾರಿಗಾಗಿ ಚೆನ್ನಾಗಿರುವ ರಸ್ತೆ ಹಗೆದು ಹಾಳು ಮಾಡಿರುವ ಪಾಲಿಕೆಯಿಂದಲೇ ಇಂತಹ ಸಮಸ್ಯೆ ನಿರ್ಮಾಣವಾಗಿದೆ ಎನ್ನುತ್ತಾರೆ ಸ್ಥಳೀಯರು.

ಬೇಸಿಗೆ ಸಂಧರ್ಭದಲ್ಲಿ ಯುಜಿಡಿ ಕಾಮಗಾರಿಗಳ ಮುಗಿಸದೇ ಮಳೆಗಾಲದ ಸಂದರ್ಭದಲ್ಲಿ ಯುಜಿಡಿ ಕಾಮಗಾರಿ ಕೈಗೆತ್ತಿಕೊಂಡಿರುವ ಪಾಲಿಕೆಯ ಅವೈಜ್ಞಾನಿಕ ಕಾಮಗಾರಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿಯುಂಟಾಗಿದೆ.
ಇನ್ನಾದರೂ ಸಂಬಂಧಪಟ್ಟವರು ಸೂಕ್ತ ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸಮಸ್ಯೆ ಸರಿಪಡಿಸಲಿ ಎನ್ನುವುದು ನಮ್ಮ ಆಶಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago