Sa Ra mahesh
ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.
ಸಾಲಿಗ್ರಾಮ ತಾಲ್ಲೂಕಿನ ಶ್ರೀರಾಮಪುರ ಗ್ರಾಮಸ್ಥರು ತಮಗೆ ಏರ್ಪಡಿಸಿದ್ದ ಸನ್ಮಾನ ಮತ್ತು ಹುಟ್ಟು ಹಬ್ಬದ ಅಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೆ.ಅರ್.ನಗರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದರು. ಆದರೆ ಈಗಿನ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ? ಅವರು ನೀಡಿರುವ ಅನುದಾನ ಪ್ರಚಾರಕ್ಕಷ್ಟೆ ಸೀಮಿತವಾಗಿದೆ ಎಂದರು.
ತಾವು ಶಾಸಕರಾಗಿದ್ದ ಶ್ರೀರಾಮಪುರ ಹಾಗೂ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಜೂರು ಅಗಿದ್ದ ಕಾಮಗಾರಿಗಳನ್ನು ಬೇರೆ ಗ್ರಾಮಗಳಿಗೆ ಬದಲಾಯಿಸುತ್ತಿದ್ದು, ಇದಕ್ಕೆ ಮಂಡಿಗನಹಳ್ಳಿ ಏತ ನೀರಾವರಿ ಯೋಜನೆಯನ್ನು ಕಾಳೇನಹಳ್ಳಿಗೆ ವರ್ಗಾಯಿಸಿ ಅಭಿವೃದ್ಧಿಯಲ್ಲಿಯು ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದರು.
ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಆರಂಭವಾಗದೆ ರೈತರು ಕಬ್ಬನ್ನು ಬೇರೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ಕಳೆದ ಬಾರಿ ಪ್ರತಿ ಟನ್ ಕಬ್ಬು ಸಾಗಾಣಿಕೆ ವೆಚ್ಚ ೧೬೦ ರೂ. ಇತ್ತು. ಈ ಬಾರಿ ೨೮೦ ರೂ. ಆಗಿದೆ. ರೈತರ ಹಿತಕಾಯ ಬೇಕಾದವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಶ್ರೀರಾಮಪುರದ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಾ.ರಾ.ಮಹೇಶ್ ಇದೇ ಸಂದರ್ಭದಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನೌಕರರಾಗಿ ಕೆಲಸ ನಿರ್ವಹಿಸಿ ಸೇವೆಯಿಂದ ನಿವೃತ್ತಿಯಾದ ಅನುಸೂಯ ಅವರನ್ನು ಸನ್ಮಾನಿಸಿದರು.
ಜಾ.ದಳ ಮುಖಂಡ ಕೆ.ಆರ್.ಸಂತೋಷ್, ಸಿದ್ದಾಪುರ ಗ್ರಾ.ಪಂ.ಸದಸ್ಯ ಎಸ್.ಕೆ.ಅಭಿಲಾಷ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಪ್ರಸನ್ನ, ಎಸ್.ಬಿ.ಶಿವಣ್ಣ, ಡೇರಿ ಮಾಜಿ ಅಧ್ಯಕ್ಷ ಎಸ್.ಟಿ.ನಾರಾಯಣ್, ಸದಸ್ಯ ಹರೀಶ್ ಬಾಬು, ಮುಖಂಡರಾದ ಭೋಜೆಗೌಡ, ರಘು ಕರೀಗೌಡ, ಭಾಸ್ಕರ್, ರಾಮು, ಕುಬೇರ, ಎಚ್.ಎಸ್.ರಾಜು, ಎಂ.ಎಸ್.ರಾಮಚಂದ್ರ, ಚಂದನ್ ಗೌಡ, ಸತ್ಯನಾರಾಯಣ, ಯಶವಂತ್ ಗೌಡ, ಎಸ್.ಎಸ್.ಬಾಲರಾಜ್, ಹೋಟೆಲ್ ಸತೀಶ್, ಶಿವರುದ್ರ, ಎಸ್.ಪಿ.ಮಂಜುನಾಥ್, ಮನೋಹರ್, ಮಣಿಶ್ರೀ, ಹೊಸೂರು ಸೊಸೈಟಿ ಅಧ್ಯಕ್ಷ ಎಚ್.ಎಸ್.ಜಗದೀಶ್, ವಕೀಲ ತಿಮ್ಮಪ್ಪ, ಹೆಬ್ಬಾಳು ಶಂಕರ್, ಮತ್ತಿತರರು ಹಾಜರಿದ್ದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…