ಮೈಸೂರು

ಅಗತ್ಯ ವಸ್ತುಗಳ ಬೆಲೆ ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್‌ ಸಾಧನೆ : ಸಾ.ರಾ ಮಹೇಶ್‌ ಆಕ್ರೋಶ

ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.

ಸಾಲಿಗ್ರಾಮ ತಾಲ್ಲೂಕಿನ ಶ್ರೀರಾಮಪುರ ಗ್ರಾಮಸ್ಥರು ತಮಗೆ ಏರ್ಪಡಿಸಿದ್ದ ಸನ್ಮಾನ ಮತ್ತು ಹುಟ್ಟು ಹಬ್ಬದ ಅಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೆ.ಅರ್.ನಗರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದರು. ಆದರೆ ಈಗಿನ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ? ಅವರು ನೀಡಿರುವ ಅನುದಾನ ಪ್ರಚಾರಕ್ಕಷ್ಟೆ ಸೀಮಿತವಾಗಿದೆ ಎಂದರು.

ತಾವು ಶಾಸಕರಾಗಿದ್ದ ಶ್ರೀರಾಮಪುರ ಹಾಗೂ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಜೂರು ಅಗಿದ್ದ ಕಾಮಗಾರಿಗಳನ್ನು ಬೇರೆ ಗ್ರಾಮಗಳಿಗೆ ಬದಲಾಯಿಸುತ್ತಿದ್ದು, ಇದಕ್ಕೆ ಮಂಡಿಗನಹಳ್ಳಿ ಏತ ನೀರಾವರಿ ಯೋಜನೆಯನ್ನು ಕಾಳೇನಹಳ್ಳಿಗೆ ವರ್ಗಾಯಿಸಿ ಅಭಿವೃದ್ಧಿಯಲ್ಲಿಯು ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದರು.

ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಆರಂಭವಾಗದೆ ರೈತರು ಕಬ್ಬನ್ನು ಬೇರೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ಕಳೆದ ಬಾರಿ ಪ್ರತಿ ಟನ್ ಕಬ್ಬು ಸಾಗಾಣಿಕೆ ವೆಚ್ಚ ೧೬೦ ರೂ. ಇತ್ತು. ಈ ಬಾರಿ ೨೮೦ ರೂ. ಆಗಿದೆ. ರೈತರ ಹಿತಕಾಯ ಬೇಕಾದವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಶ್ರೀರಾಮಪುರದ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಾ.ರಾ.ಮಹೇಶ್ ಇದೇ ಸಂದರ್ಭದಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನೌಕರರಾಗಿ ಕೆಲಸ ನಿರ್ವಹಿಸಿ ಸೇವೆಯಿಂದ ನಿವೃತ್ತಿಯಾದ ಅನುಸೂಯ ಅವರನ್ನು ಸನ್ಮಾನಿಸಿದರು.

ಜಾ.ದಳ ಮುಖಂಡ ಕೆ.ಆರ್.ಸಂತೋಷ್, ಸಿದ್ದಾಪುರ ಗ್ರಾ.ಪಂ.ಸದಸ್ಯ ಎಸ್.ಕೆ.ಅಭಿಲಾಷ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಪ್ರಸನ್ನ, ಎಸ್.ಬಿ.ಶಿವಣ್ಣ, ಡೇರಿ ಮಾಜಿ ಅಧ್ಯಕ್ಷ ಎಸ್.ಟಿ.ನಾರಾಯಣ್, ಸದಸ್ಯ ಹರೀಶ್ ಬಾಬು, ಮುಖಂಡರಾದ ಭೋಜೆಗೌಡ, ರಘು ಕರೀಗೌಡ, ಭಾಸ್ಕರ್, ರಾಮು, ಕುಬೇರ, ಎಚ್.ಎಸ್.ರಾಜು, ಎಂ.ಎಸ್.ರಾಮಚಂದ್ರ, ಚಂದನ್ ಗೌಡ, ಸತ್ಯನಾರಾಯಣ, ಯಶವಂತ್ ಗೌಡ, ಎಸ್.ಎಸ್.ಬಾಲರಾಜ್, ಹೋಟೆಲ್ ಸತೀಶ್, ಶಿವರುದ್ರ, ಎಸ್.ಪಿ.ಮಂಜುನಾಥ್, ಮನೋಹರ್, ಮಣಿಶ್ರೀ, ಹೊಸೂರು ಸೊಸೈಟಿ ಅಧ್ಯಕ್ಷ ಎಚ್.ಎಸ್.ಜಗದೀಶ್, ವಕೀಲ ತಿಮ್ಮಪ್ಪ, ಹೆಬ್ಬಾಳು ಶಂಕರ್, ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

7 mins ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

13 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

14 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

14 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

14 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

14 hours ago