Sa Ra mahesh
ಹೊಸೂರು : ಗೃಹಲಕ್ಷ್ಮೀಯ 2 ಸಾವಿರ ರೂ. ನೀಡಲು ಸರ್ಕಾರದ ಬಳಿ ಹಣ ಇಲ್ಲದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನ ಸಾಮಾನ್ಯರಿಗೆ ಬರೆ ಎಳೆದಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಜಾ.ದಳ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.
ಸಾಲಿಗ್ರಾಮ ತಾಲ್ಲೂಕಿನ ಶ್ರೀರಾಮಪುರ ಗ್ರಾಮಸ್ಥರು ತಮಗೆ ಏರ್ಪಡಿಸಿದ್ದ ಸನ್ಮಾನ ಮತ್ತು ಹುಟ್ಟು ಹಬ್ಬದ ಅಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೆ.ಅರ್.ನಗರ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದರು. ಆದರೆ ಈಗಿನ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದಾರೆ? ಅವರು ನೀಡಿರುವ ಅನುದಾನ ಪ್ರಚಾರಕ್ಕಷ್ಟೆ ಸೀಮಿತವಾಗಿದೆ ಎಂದರು.
ತಾವು ಶಾಸಕರಾಗಿದ್ದ ಶ್ರೀರಾಮಪುರ ಹಾಗೂ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಮಂಜೂರು ಅಗಿದ್ದ ಕಾಮಗಾರಿಗಳನ್ನು ಬೇರೆ ಗ್ರಾಮಗಳಿಗೆ ಬದಲಾಯಿಸುತ್ತಿದ್ದು, ಇದಕ್ಕೆ ಮಂಡಿಗನಹಳ್ಳಿ ಏತ ನೀರಾವರಿ ಯೋಜನೆಯನ್ನು ಕಾಳೇನಹಳ್ಳಿಗೆ ವರ್ಗಾಯಿಸಿ ಅಭಿವೃದ್ಧಿಯಲ್ಲಿಯು ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದರು.
ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಆರಂಭವಾಗದೆ ರೈತರು ಕಬ್ಬನ್ನು ಬೇರೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ಕಳೆದ ಬಾರಿ ಪ್ರತಿ ಟನ್ ಕಬ್ಬು ಸಾಗಾಣಿಕೆ ವೆಚ್ಚ ೧೬೦ ರೂ. ಇತ್ತು. ಈ ಬಾರಿ ೨೮೦ ರೂ. ಆಗಿದೆ. ರೈತರ ಹಿತಕಾಯ ಬೇಕಾದವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಶ್ರೀರಾಮಪುರದ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಾ.ರಾ.ಮಹೇಶ್ ಇದೇ ಸಂದರ್ಭದಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನೌಕರರಾಗಿ ಕೆಲಸ ನಿರ್ವಹಿಸಿ ಸೇವೆಯಿಂದ ನಿವೃತ್ತಿಯಾದ ಅನುಸೂಯ ಅವರನ್ನು ಸನ್ಮಾನಿಸಿದರು.
ಜಾ.ದಳ ಮುಖಂಡ ಕೆ.ಆರ್.ಸಂತೋಷ್, ಸಿದ್ದಾಪುರ ಗ್ರಾ.ಪಂ.ಸದಸ್ಯ ಎಸ್.ಕೆ.ಅಭಿಲಾಷ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಪ್ರಸನ್ನ, ಎಸ್.ಬಿ.ಶಿವಣ್ಣ, ಡೇರಿ ಮಾಜಿ ಅಧ್ಯಕ್ಷ ಎಸ್.ಟಿ.ನಾರಾಯಣ್, ಸದಸ್ಯ ಹರೀಶ್ ಬಾಬು, ಮುಖಂಡರಾದ ಭೋಜೆಗೌಡ, ರಘು ಕರೀಗೌಡ, ಭಾಸ್ಕರ್, ರಾಮು, ಕುಬೇರ, ಎಚ್.ಎಸ್.ರಾಜು, ಎಂ.ಎಸ್.ರಾಮಚಂದ್ರ, ಚಂದನ್ ಗೌಡ, ಸತ್ಯನಾರಾಯಣ, ಯಶವಂತ್ ಗೌಡ, ಎಸ್.ಎಸ್.ಬಾಲರಾಜ್, ಹೋಟೆಲ್ ಸತೀಶ್, ಶಿವರುದ್ರ, ಎಸ್.ಪಿ.ಮಂಜುನಾಥ್, ಮನೋಹರ್, ಮಣಿಶ್ರೀ, ಹೊಸೂರು ಸೊಸೈಟಿ ಅಧ್ಯಕ್ಷ ಎಚ್.ಎಸ್.ಜಗದೀಶ್, ವಕೀಲ ತಿಮ್ಮಪ್ಪ, ಹೆಬ್ಬಾಳು ಶಂಕರ್, ಮತ್ತಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…