ಮೈಸೂರು

ಮೈಸೂರಲ್ಲಿ ರಜನಿಕಾಂತ್‌ : ಅಭಿಮಾನಿಗಳಿಗೆ ನಮಸ್ಕರಿಸಿದ ತಲೈವಾ

ಮೈಸೂರು :‌ ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಜೈಲರ್‌ -2 ಸಿನಿಮಾದ ಕೆಲವು ಭಾಗದ ಚಿತ್ರಿಕರಣ ಮೈಸೂರಿನ ಬಿಳಿಕೆರೆಯ ಹುಲ್ಲೇನಹಳ್ಳಿಯಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ರಜನಿಕಾಂತ್‌ ಅವರನ್ನು ನೋಡಲು ಮುಗಿಬಿದ್ದು ಚಿತ್ರಕರಣ ಸ್ಥಳಕ್ಕೆ ದೌಡಯಿಸುತ್ತಿದ್ದಾರೆ.

ಇದನ್ನೂ ಓದಿ: ಮೈಸೂರಲ್ಲಿ ಜೈಲರ್-‌2 ಶೂಟಿಂಗ್‌ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ

ಚಿತ್ರೀಕರಣದ ಸಂದರ್ಭದಲ್ಲಿ ಸಾರ್ವಜನಿಕ ನಿರ್ಬಂಧಕ್ಕೆ ಚಿತ್ರ ತಂಡವು ಎಚ್ಚರ ವಹಿಸಿದೆ. ಎಲ್ಲ ಕಡೆಗಳಲ್ಲಿ ಯೂ ಬಿಗಿ ಬಂದೋ ಬಸ್ತ್ ಹಾಕಲಾಗಿದೆ. ಚಿತ್ರೀಕರಣ ಮುಗಿದ ನಂತರ ಅಭಿಮಾನಿಗಳು ರಜನಿಕಾಂತ್ ಅವರನ್ನು ನೋಡಲು ಚಿತ್ರೀಕರಣದ ಸ್ಥಳಕ್ಕೆ ದೌಡಾಯಿಸಿದ್ದು, ನಟ ರಜನಿಕಾಂತ್ ಅಭಿಮಾನಿಗಳಿಗೆ ಕೈಬೀಸಿ, ನಮಸ್ಕರಿಸಿ ಕಾರಿನಲ್ಲಿ ತೆರಳುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡುತ್ತಿವೆ.

ಈ ಚಿತ್ರದ ಚಿತ್ರೀಕರಣವೂ ನಾಲ್ಕರಿಂದ ಐದು ದಿನಗಳವರೆಗೆ ನಡೆಯಲಿದೆ. ಈಗಾಗಲೇ ಮೈಸೂರು ಭಾಗದ ಹುಲ್ಲೇನಹಳ್ಳಿಯ ಸೇತುವೆ ಮೇಲೆ ಕೆಲವು ದೃಶ್ಯಗಳು ಹಾಗೂ ಆಕ್ಷನ್ ದೃಶ್ಯಗಳನ್ನು ಮೂರು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಇದೇ ಸ್ಥಳದಲ್ಲಿ ೪೦ ವರ್ಷಗಳ ಹಿಂದೆ ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್ ಅವರ ನಟನೆಯ ಹೊಸಬೆಳಕು ಸಿನಿಮಾ ಚಿತ್ರೀಕರಣವಾಗಿತ್ತು. ಇದೀಗ ಚಿತ್ರತಂಡವು ಹುಣಸೂರಿನ ಬಿಳಿಕೆರೆಯಲ್ಲಿ ಚಿತ್ರೀಕರಣ ನಡೆಸುತ್ತಿದೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

9 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

10 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

11 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

12 hours ago